ADVERTISEMENT

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿ. 5ರಂದು ಉಪಚುನಾವಣೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2019, 15:47 IST
Last Updated 27 ಸೆಪ್ಟೆಂಬರ್ 2019, 15:47 IST
   

ಬೆಂಗಳೂರು: ಶಾಸಕರು ಅನರ್ಹವಾಗಿರುವರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಉಪಚುನಾವಣೆ ಘೋಷಣೆ ಮಾಡಲಾಗಿದೆ. ಡಿ.9ರಂದು ಮತ ಎಣಿಕೆ ನಡೆಯಲಿದೆ.

ಶುಕ್ರವಾರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು,ನವೆಂಬರ್ 11ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

* ನ. 18ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ.

ADVERTISEMENT

* ನ. 19 ನಾಮಪತ್ರ ಪರಿಶೀಲನೆ

* ನ. 21 ನಾಮಪತ್ರ‌ ವಾಪಾಸ್ ಪಡೆಯಲು ಕೊನೆಯ ದಿನ.

* ಡಿ. 5ರಂದು ಮತದಾನ.

* ಡಿ. 9ರಂದು ಮತ ಎಣಿಕೆ.

* ಡಿ. 11ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣ.

ಈ ಮೊದಲು ಚುನಾವಣಾ ಆಯೋಗ ಅಕ್ಟೋಬರ್‌ 21ರಂದು 15 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಮಾಡಿತ್ತು. ಅನರ್ಹರ ಅರ್ಜಿ ವಿಚಾರಣೆ ನಡೆಸಿದ್ದಸುಪ್ರೀಂ ಕೋರ್ಟ್‌,ಉಪಚುನಾವಣೆಯನ್ನು ಮುಂದೂಡಿ ಆದೇಶ ಹೊರಡಿಸಿತ್ತು. ಇದಾದ ಬೆನ್ನಲ್ಲೇ ಮತ್ತೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.