ADVERTISEMENT

ಎಂಟಿಬಿಯಿಂದ ಕುತಂತ್ರ ರಾಜಕೀಯ: ಶರತ್‌

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2019, 13:42 IST
Last Updated 1 ಡಿಸೆಂಬರ್ 2019, 13:42 IST
ಶರತ್ ಬಚ್ಚೇಗೌಡ
ಶರತ್ ಬಚ್ಚೇಗೌಡ    

ಹೊಸಕೋಟೆ: ‘ಎಂಟಿಬಿ ನಾಗರಾಜ್ ಚುನಾವಣೆಗೆ ಎಲ್ಲ ರೀತಿಯ ತಂತ್ರ–ಕುತಂತ್ರ ಮಾಡುತ್ತಾರೆ. ಅವರೇ ಹೇಳಿದಂತೆ ಅವರು ಹಣ ಕೊಟ್ಟು ಮತ ಪಡೆಯುತ್ತಾರೆ’ ಎಂದು ಶರತ್ ಬಚ್ಚೇಗೌಡ ತಿಳಿಸಿದರು.

ಇಲ್ಲಿನ ಸ್ವಾಭಿಮಾನಿ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಬಚ್ಚೇಗೌಡರು 40 ವರ್ಷ ರಾಜಕೀಯ ಜೀವನದಲ್ಲಿ ನೇರ ನುಡಿಯಿಂದ ಬದುಕಿದವರು. ನಾವು ಯಾರಿಗೂ ಮೋಸ ಮಾಡಿಲ್ಲ. ಯಾರನ್ನೂ ದಾರಿ ತಪ್ಪಿಸಿಲ್ಲ. ನಮ್ಮ ಜೊತೆ ಯಾರೇ ಬಂದು ಪ್ರಚಾರ ಮಾಡಿದರೂ ಸ್ವಾಗತಿಸುತ್ತೇವೆ’ ಎಂದು ತಿಳಿಸಿದರು.

ADVERTISEMENT

‘ರಾಜ್ಯದ ಬೇರೆ ಬೇರೆ ಕಡೆಗಳಿಂದ ಜನರು ಬಂದು ಸಹಾಯ, ಬೆಂಬಲ ನೀಡುತ್ತಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.