ಬೆಂಗಳೂರು: ಗ್ಯಾರಂಟಿಗಳನ್ನು ಜಾರಿಗೊಳಿಸಿ ಸತತ ಸಭೆಗಳ ನಂತರ ಕೊನೆಗೂ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸುವ ಮೂಲಕ 5 ಗ್ಯಾರಂಟಿಗಳ ಮಾಹಿತಿ ನೀಡಿದ್ದು ಈ ವರ್ಷವೇ ಎಲ್ಲಾ ಯೋಜನೆ ಜಾರಿ ತರುತ್ತೇವೆ ಎಂದು ತಿಳಿಸಿದ್ದಾರೆ.
ಶಕ್ತಿ ಯೋಜನೆ: ವಿದ್ಯಾರ್ಥಿನಿಯರೂ ಸೇರಿದಂತೆ ಎಲ್ಲ ವರ್ಗಗಳ ಮಹಿಳೆಯರಿಗೆ ಎಸಿ ಹಾಗೂ ಲಕ್ಷುರಿ ಬಸ್ಗಳನ್ನು ಹೊರತುಪಡಿಸಿ ಇತರ ಎಲ್ಲ ಬಸ್ಗಳಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗುವುದು. ಜೂನ್ 11 ರಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು. ಈ ಯೋಜನೆಯು ಶೇ. 94 ರಷ್ಟು ಮಹಿಳಾ ಪ್ರಯಾಣಿಕರಿಗೆ ಅನುಕೂಲಕರವಾಗಲಿದೆ. ಬಸ್ಗಳಲ್ಲಿ ಶೇ. 50 ರಷ್ಟು ಸೀಟುಗಳನ್ನು ಪುರುಷರಿಗೆ ಮೀಸಲಿರಿಸಲಾಗುವುದು.
ಉಚಿತ ಬಸ್ ಪ್ರಯಣದ ಸವಲತ್ತನ್ನು ತೃತೀತ ಲಿಂಗಿಗಳಿಗೂ ಒದಗಿಸಲಾಗಿದೆ.
ಇದನ್ನೂ ಓದಿ... ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದೇವೆ: ಸಿದ್ದರಾಮಯ್ಯ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.