ಬೆಂಗಳೂರು: ಗ್ಯಾರಂಟಿಗಳನ್ನು ಜಾರಿಗೊಳಿಸಿ ಸತತ ಸಭೆಗಳ ನಂತರ ಕೊನೆಗೂ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸುವ ಮೂಲಕ 5 ಗ್ಯಾರಂಟಿಗಳ ಮಾಹಿತಿ ನೀಡಿದ್ದು ಈ ವರ್ಷವೇ ಎಲ್ಲಾ ಯೋಜನೆ ಜಾರಿ ತರುತ್ತೇವೆ ಎಂದು ತಿಳಿಸಿದ್ದಾರೆ.
ಯುವನಿಧಿ: 2022-23ನೇ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ ಕೋರ್ಸುಗಳೂ ಸೇರಿದಂತೆ ಎಲ್ಲ ವಿಧದ ಪದವೀಧರ ಯುವಕ-ಯುವತಿಯರು, ಡಿಪ್ಲೊಮಾ ಹೊಂದಿದವರಿಗೆ ಈ ಯೋಜನೆ ಅನ್ವಯಿಸುತ್ತದೆ. ಪದವಿ ಪಡೆದು 180 ದಿನಗಳಾದರೂ ಉದ್ಯೋಗ ದೊರೆಯದ ಪದವೀಧರರಿಗೆ 24 ತಿಂಗಳ ಅವಧಿಗೆ ಮಾಸಿಕ 3000 ರೂ. ಹಾಗೂ ಡಿಪ್ಲೊಮಾದಾರರಿಗೆ ಮಾಸಿಕ 1500 ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು.
ಇದನ್ನೂ ಓದಿ... ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದೇವೆ: ಸಿದ್ದರಾಮಯ್ಯ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.