ADVERTISEMENT

ರಾಜ್ಯ ಸಂಪುಟ ಸಭೆ ಮೇ 11ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 4 ಮೇ 2022, 15:54 IST
Last Updated 4 ಮೇ 2022, 15:54 IST
   

ಬೆಂಗಳೂರು: ಗುರುವಾರ (ಮೇ 5) ಬೆಳಿಗ್ಗೆ ನಿಗದಿಯಾಗಿದ್ದ ಸಂಪುಟ ಸಭೆಯನ್ನು ಮೇ 11ಕ್ಕೆ ಮುಂದೂಡಲಾಗಿದೆ.

ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ 11.30ರಿಂದ ಸಂಪುಟ ಸಭೆ ನಡೆಯಬೇಕಿತ್ತು. ಈ ಸಭೆಯನ್ನು ರದ್ದುಗೊಳಿಸಿದ್ದು, ಮೇ 11ರ ಬೆಳಿಗ್ಗೆ 11 ಗಂಟೆಗೆ ಸಂಪುಟ ಸಭೆ ನಡೆಯಲಿದೆ ಎಂದು ರಾಜ್ಯ ಸರ್ಕಾರದ ಸಚಿವ ಸಂಪುಟ ವಿಭಾಗದ ಜಂಟಿ ಕಾರ್ಯದರ್ಶಿ ಆರ್‌. ಚಂದ್ರಶೇಖರ್‌ ಬುಧವಾರ ಪರಿಷ್ಕೃತ ಸೂಚನಾ ಪತ್ರ ಹೊರಡಿಸಿದ್ದಾರೆ.

ಸಂಪುಟ ಪುನರ್‌ ರಚನೆ ಕುರಿತು ಬಿಜೆಪಿಯಲ್ಲಿ ಬಿರುಸಿನ ಚರ್ಚೆ ನಡೆಯುತ್ತಿದೆ. ಸಚಿವರು ಹಾಗೂ ಖಾತೆಗಳ ಬದಲಾವಣೆ ಆಗುವ ಸಾಧ್ಯತೆ ಇರುವ ಕಾರಣದಿಂದಾಗಿಯೇ ಸಂಪುಟ ಸಭೆ ಮುಂದೂಡಿಕೆಯಾಗಿದೆ ಎಂಬ ಮಾತು ಬಿಜೆಪಿಯಲ್ಲಿ ಕೇಳಿ ಬರುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.