ಬೆಂಗಳೂರು:ಕೊಡಗಿನಲ್ಲಿ ನಿರಂತರ ಮಳೆ ಹಾಗೂ ಭೂಕುಸಿತದಿಂತದಿಂದ ಉಂಟಾಗಿರುವ ಅತಿವೃಷ್ಟಿ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ವೈಮಾನಿಕ ಸಮೀಕ್ಷೆ ಮೂಲಕ ಅವಲೋಕಿಸಿದರು.
ಬೆಳಿಗ್ಗೆ ಬೆಂಗಳೂರಿನಲ್ಲಿ ಕೊಡಗಿನ ಪರಿಸ್ಥಿತಿಯ ಕುರಿತಂತೆ ಅಧಿಕಾರಿಗಳ ಸಭೆ ನಡೆಸಿ, ಮಾಹಿತಿ ಪಡೆದ ಸಿಎಂ, ಬಳಿಕ ಕೊಡಗಿಗೆ ತೆರಳಿ ಅತಿವೃಷ್ಟಿ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.
ಕೊಡಗಿನಲ್ಲಿ ಸಂಕಷ್ಟದಲ್ಲಿದ್ದವರಿಗೆ ಸಹಾಯವಾಣಿ ಸಂಖ್ಯೆಗಳನ್ನು ಡಿಜಿಪಿ ಡಿ.ರೂಪಾ ಅವರು ಟ್ವಿಟ್ ಮಾಡಿದ್ದಾರೆ.
ಕೊಡಗಿನಲ್ಲಿ ಗಂಜಿ ಕೇಂದ್ರ ಮತ್ತು ನಿಯೋಜಿತ ವೈದ್ಯರ ಮಾಹಿತಿಯೊಂದನ್ನು ರೂಪಾ ಅವರು ಟ್ವಿಟ್ ಮಾಡಿದ್ದಾರೆ.
* ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.