ಬೆಂಗಳೂರು: ಕೋವಿಡ್ ನಿರ್ವಹಣೆ ಹಾಗೂ ಮಾರ್ಗಸೂಚಿಗಳ ಬಗ್ಗೆ ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ರಾಜ್ಯದ ಜಿಲ್ಲೆಗಳಲ್ಲಿ ಹಾಗೂ ಕಸ್ಟರ್ಗಳಲ್ಲಿ ಕೋವಿಡ್ನ ಸ್ಥಿತಿಗತಿ ಹಾಗೂ ನಿರ್ವಹಣೆ, ಓಮೈಕ್ರಾನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಗಳ ವಿವರ, ವಿವಿಧ ದೇಶಗಳಲ್ಲಿ ಓಮೈಕ್ರಾನ್ ತಳಿ ಹಾಗೂ ನೀಡಲಾಗುತ್ತಿರುವ ಚಿಕಿತ್ಸೆ ಬಗ್ಗೆ ಅಧಿಕಾರಿಗಳಿಂದ ವಿವರ ಪಡೆಯಲಾಗಿದೆ ಎಂದು ತಿಳಿಸಿದರು.
2022ರ ಮಾರ್ಚ್ವರೆಗೆ ಕೋವಿಡ್ ನಿಯಂತ್ರಣಕ್ಕೆ ಬೇಕಾದ ಹಣಕಾಸಿನ ವಿವರಗಳನ್ನು ಪಡೆಯಲಾಗುವುದು. 2 ನೇ ಅಲೆಯಲ್ಲಿ ಬಿಬಿಎಂಪಿ, ಕಂದಾಯ, ವೈದ್ಯಕೀಯ, ಆರೋಗ್ಯ ಇಲಾಖೆಗಳು, ಆಮ್ಲಜನಕದ ಘಟಕಗಳು, ಲ್ಯಾಬ್ಗಳು ಸೇರಿದಂತೆ ಕೋವಿಡ್ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳಿಗೆ ಬಾಕಿ ಹಣ ಬಿಡುಗಡೆ ಮಾಡುವ ಬಗ್ಗೆಯೂ ಚರ್ಚಿಸಲಾಗಿದೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.