ADVERTISEMENT

Video | ಉಡುಪಿಯ ಕಾರ್ಕಳದಲ್ಲಿ ಪರಶುರಾಮ ಥೀಂ ಪಾರ್ಕ್‌ ಲೋಕಾರ್ಪಣೆ

​ಪ್ರಜಾವಾಣಿ ವಾರ್ತೆ
Published 28 ಜನವರಿ 2023, 13:34 IST
Last Updated 28 ಜನವರಿ 2023, 13:34 IST

ತುಳುನಾಡಿನ ಸೃಷ್ಟಿಕರ್ತ ಪರಶುರಾಮನ 33 ಅಡಿ ಎತ್ತರದ ಕಂಚಿನ ಪ್ರತಿಮೆ ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಬೈಲೂರಿನ ಉಮಿಕಲ್‌ ಬೆಟ್ಟದ ತುದಿಯಲ್ಲಿ ಕಂಗೊಳಿಸುತ್ತಿದೆ. ಒಂದು ಕೈಯಲ್ಲಿ ಬಿಲ್ಲು, ಮತ್ತೊಂದು ಕೈಯಲ್ಲಿ ಕೊಡಲಿ ಹಿಡಿದಿರುವ ಭಂಗಿಯಲ್ಲಿ ನಿಂತಿರುವ ಪರಶುರಾಮನ ಪ್ರತಿಮೆ ಬೆರಗು ಮೂಡಿಸುವಂತಿದೆ. ಬರೋಬ್ಬರಿ 15 ಟನ್ ಕಂಚು ಬಳಸಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ಶಿಲ್ಪಿ ಕೃಷ್ಣಾನಾಯ್ಕ ಪ್ರತಿಮೆಯನ್ನು ತಯಾರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.