ಬೆಂಗಳೂರು: ಹೆಚ್ಚು ಉದ್ಯೋಗ ಸೃಷ್ಟಿ ಮಾಡುವವರಿಗೆ ಸರ್ಕಾರ ಪ್ರೋತ್ಸಾಹ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯೋಜಿಸಿದ್ದ ‘ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಕೈಗಾರಿಕಾ ನೀತಿ ಜೊತೆ ಉದ್ಯೋಗ ನೀತಿಯನ್ನೂ ಜಾರಿಗೊಳಿಸಲಾಗುವುದು. ದೇಶದಲ್ಲಿ ಅತಿ ಹೆಚ್ಚು ನವೋದ್ಯಮಗಳು ಬೆಂಗಳೂರಿನಲ್ಲಿವೆ. ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣ ಇದೆ’ ಎಂದು ಅವರು ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ , ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವರಾದ ಹಾಲಪ್ಪ ಆಚಾರ್ ಸೇರಿದಂತೆ ಇತರೆ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.