ADVERTISEMENT

ಬಸನಗೌಡ ಪಾಟೀಲ್‌ ಯತ್ನಾಳ್‌ ಅತಿ ಉತ್ಸಾಹಿ ಮಿತ್ರ: ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 18 ಜನವರಿ 2023, 10:49 IST
Last Updated 18 ಜನವರಿ 2023, 10:49 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೀರೂರು (ಚಿಕ್ಕಮಗಳೂರು): ‘ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಅತಿ ಉತ್ಸಾಹ ಮಿತ್ರರು ಎಂದು ಹೇಳುತ್ತೇವೆ. ಉತ್ಸಾಹದಲ್ಲಿ ಕೆಲ ಹೇಳಿಕೆ ನೀಡುತ್ತಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಯತ್ನಾಳ್‌ ಅವರ ವಿಚಾರವನ್ನು ದೆಹಲಿಯವರಿಗೆ ತಿಳಿಸಿದ್ದೇನೆ. ಹೈಕಮಾಂಡ್‌ನವರು ಅವರನ್ನು ಕರೆಸಿ ಮಾತನಾಡಿ ಸರಿಪಡಿಸುತ್ತಾರೆ’ ಎಂದು ಉತ್ತರಿಸಿದರು.

‘ಗೃಹಿಣಿ ಶಕ್ತಿ ಯೋಜನೆ ರೂಪಿಸುವುದಾಗಿ ಈಗಾಗಲೇ ಹೇಳಿದ್ದೇನೆ. ಅಸ್ಸಾಂನಲ್ಲಿ ಈ ಯೋಜನೆ ಜಾರಿಯಲ್ಲಿದೆ, ಅದೇ ರೀತಿ ಇಲ್ಲಿಯೂ ಅನುಷ್ಠಾನಗೊಳಿಸುವ ಚಿಂತನೆ ಇದೆ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

‘ಬಡ ಕುಟುಂಬಗಳವರು ನಿತ್ಯದ ಅಗತ್ಯ ವಸ್ತುಗಳನ್ನು ಪಡೆದುಕೊಳ್ಳಲು, ಆರೋಗ್ಯ ನಿಟ್ಟಿನಲ್ಲಿ ಹಲವು ಯೋಜನೆಗಳು ಇವೆ. ಗೃಹಿಣಿ ಶಕ್ತಿ ರೂಪಿಸಿ ನೆರವು ಒದಗಿಸಿದರೆ ಅವರಿಗೆ ಅನುಕೂಲವಾಗುತ್ತದೆ’ ಎಂದರು.

‘ಮೀಸಲಾತಿ ವಿಚಾರದಲ್ಲಿ ಗೊಂದಲಗಳಿಲ್ಲ. ಮಧ್ಯಂತರ ವರದಿಯನ್ನು ಸಚಿವ ಸಂಪುಟದ ಮುಂದೆ ಇಟ್ಟಿದ್ದೇವೆ. ಅಂತಿಮ ವರದಿ ನಂತರ ಸ್ಪಷ್ಟ ಚಿತ್ರಣ ಲಭಿಸುತ್ತದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.