ADVERTISEMENT

ರಾಜ್ಯಪಾಲರನ್ನು ಭೇಟಿ ಮಾಡಿದ ಯಡಿಯೂರಪ್ಪ: ಹಲವು ಊಹಾಪೋಹ

ಸಂಪುಟ ಪುನಾರಚನೆ ಕುರಿತು ಚರ್ಚೆ?

​ಪ್ರಜಾವಾಣಿ ವಾರ್ತೆ
Published 31 ಜುಲೈ 2020, 8:23 IST
Last Updated 31 ಜುಲೈ 2020, 8:23 IST
ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ    

ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಶುಕ್ರವಾರ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಊಹಾಪೋಹಗಳಿಗೆ ಕಾರಣವಾಗಿದೆ.

ಸಚಿವ ಸಂಪುಟ ಪುನಾರಚನೆ ಆಗಸ್ಟ್‌ನಲ್ಲಿ ನಡೆಯುವ ಸಾಧ್ಯತೆ ಇರುವುದರಿಂದ ಮುಖ್ಯಮಂತ್ರಿಯವರ ಈ ಭೇಟಿ ಮಹತ್ವ ಪಡೆದಿದೆ. ನಾಲ್ಕರಿಂದ ಐದು ಸಚಿವರನ್ನು ಕೈಬಿಟ್ಟು ಸಂಪುಟ ಪುನಾರಚನೆ ಕಸರತ್ತಿಗೆ ಒಪ್ಪಿಗೆ ಪಡೆಯಲು ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಸಾಧ್ಯತೆ ಇದೆ. ಈ ಕುರಿತು ಯಡಿಯೂರಪ್ಪ ರಾಜ್ಯಪಾಲರಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ರಾಜ್ಯಪಾಲರ ಭೇಟಿ ವೇಳೆಯಲ್ಲಿ ಜತೆಗಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಬಳಿಕ ಸುದ್ದಿಗಾರರ ಜತೆ ಮಾತನಾಡಿ,ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆದಿಲ್ಲ. ಸ್ವಾತಂತ್ರ್ಯ ದಿನೋತ್ಸವ ಸಿದ್ಧತೆಗಳು, ಕೋವಿಡ್‌ ನಿರ್ವಹಣೆ ಕುರಿತು ರಾಜ್ಯಪಾಲರಿಗೆ ಮಾಹಿತಿ ನೀಡಲಾಗಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಮಾರಾಟದ ಜಾಲದ ಬಗ್ಗೆ ಸರ್ಕಾರ ಕೈಗೊಂಡಿರುವ ಕ್ರಮದ ಬಗ್ಗೆ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.