ADVERTISEMENT

ಬಿಜೆಪಿಯದ್ದು ಪ್ರಜೆಗಳನ್ನು ಹತ್ಯೆ ಮಾಡುವ ಉಗ್ರ ಮನಸ್ಥಿತಿ: ಕಾಂಗ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಅಕ್ಟೋಬರ್ 2021, 12:19 IST
Last Updated 4 ಅಕ್ಟೋಬರ್ 2021, 12:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಉತ್ತರ ಪ್ರದೇಶದ ಲಖಿಂಪುರ ಘಟನೆಗೆ ಸಂಬಂಧಿಸಿ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರದ್ದು ಪ್ರಜೆಗಳನ್ನು ಹತ್ಯೆ ಮಾಡುವ ಉಗ್ರ ಮನಸ್ಥಿತಿ ಎಂದು ಟೀಕಿಸಿದೆ.

‘ಅಸಹಿಷ್ಣ ಬಿಜೆಪಿಯು ತನ್ನ ಅನೀತಿಯನ್ನು ವಿರೋಧಿಸುವ ಪ್ರಜೆಗಳನ್ನು ಹತ್ಯೆ ಮಾಡುವ ಉಗ್ರ ಮನಸ್ಥಿತಿಯನ್ನು ಹೊಂದಿದೆ. ಹಿಂದೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು 'ಗೋಲಿ ಮಾರೋ' ಎಂದಿದ್ದರು. ಈಗ ಹರಿಯಾಣ ಮುಖ್ಯಮಂತ್ರಿ ರೈತರನ್ನು ಹೊಡೆಯಿರಿ, ಬಡಿಯಿರಿ ಎಂದು ಹೇಳಿದ್ದಾರೆ. ಇದು ಬಿಜೆಪಿಯ ಭಯೋತ್ಪಾದಕ ಮನಸ್ಥಿತಿ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದಕ್ಕೂ ಮುನ್ನ ಲಖಿಂಪುರ ಘಟನೆಗೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯುಳ್ಳ ವಿಡಿಯೊಗಳನ್ನು ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಅದಕ್ಕೆ ತಿರುಗೇಟು ನೀಡಿದ್ದ ಬಿಜೆಪಿ, ನಕಲಿ ಗಾಂಧಿ ಕುಟುಂಬದವರಿಗೆ ಅನ್ನದಾತರ ನೋವಿನ ಬಗ್ಗೆ ನೈಜ ಕಾಳಜಿ ಇದೆಯೇ ಎಂದು ಪ್ರಶ್ನಿಸಿತ್ತು. ಜತೆಗೆ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರೈತರ ಮೇಲೆ ಪೊಲೀಸರು ಹಲ್ಲೆ ಮಾಡಿದ್ದ ವಿಡಿಯೊವನ್ನು ಟ್ವೀಟ್ ಮಾಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.