ಬೆಂಗಳೂರು: ಒಂದು ವರ್ಷ ಕಳೆದರೂ ಬಿಜೆಪಿ ವಿಧಾನಸಭೆ ಸೋಲಿನ ಶಾಕ್ನಿಂದ ಹೊರ ಬರುವುದಿಲ್ಲ ಎಂದು ಕಾಂಗ್ರೆಸ್ ಕುಹಕವಾಡಿದೆ.
ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿಗೆ ದೊಡ್ಡ ಶಾಕ್ ಹೊಡೆಯಲಿದೆ ಎಂದಿರುವ ಕಾಂಗ್ರೆಸ್, ಇದರ ಮುನ್ಸೂಚನೆ ಅರಿತೇ ಪ್ರತಾಪ್ ಸಿಂಹ ಅವರ ರೋಧನೆ ಶುರುವಾಗಿದೆ ಎಂದು ವ್ಯಂಗ್ಯವಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಚುನಾವಣೆ ನಡೆದು ಒಂದು ತಿಂಗಳ ನಂತರವೂ ಬಿಜೆಪಿ ಸೋಲಿನ ಶಾಕ್ನಿಂದ ಹೊರಬಂದಿಲ್ಲ, ಒಂದು ವರ್ಷ ಕಳೆದರೂ ಹೊರಬರುವುದಿಲ್ಲ ಆ ಮಟ್ಟಿಗೆ ಶಾಕ್ ಹೊಡೆದಿದೆ.ನಂತರ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಬಹುದೊಡ್ಡ ಶಾಕ್ ಹೊಡೆಯಲಿದೆ. ಇದರ ಮುನ್ಸೂಚನೆ ಅರಿತೇ ಪ್ರತಾಪ್ ಸಿಂಹ ಅವರ ರೋಧನೆ ಶುರುವಾಗಿದೆ. ಈ ಶೋಕಾಚರಣೆ ಇನ್ಮುಂದೆ ಬಿಜೆಪಿಗೆ ನಿರಂತರವಾಗಿರಲಿದೆ‘ ಎಂದು ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.