ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಪ್ರವಾಹ ಸ್ಥಿತಿ ತಲೆದೋರಿರುವುದರಿಂದ ಆಡಳಿತ ಪಕ್ಷವನ್ನು ಹಾಗೂ ಸಚಿವರನ್ನು ಕರ್ನಾಟಕ ಕಾಂಗ್ರೆಸ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.
ಬೆಂಗಳೂರು ಸೇರಿದಂತೆ ಸ್ಥಳದಲ್ಲಿದ್ದು ಸಮಸ್ಯೆಗಳನ್ನು ಬಗೆಹರಿಸಬೇಕಾಗಿರುವ ಸಚಿವರು ಕಾಣೆಯಾಗಿದ್ದಾರೆ ಎಂದು ಆರೋಪಿಸಿ ಸಚಿವರ ಪಟ್ಟಿ ಬಿಡುಗಡೆ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಸಚಿವರಾದ ಮುನಿರತ್ನ, ಬೈರತಿ ಬಸವರಾಜ, ಅಶ್ವತ್ಥ್ ನಾರಾಯಣ, ಕೆ.ಗೋಪಾಲಯ್ಯ, ವಿ.ಸೋಮಣ್ಣ, ಆರ್, ಅಶೋಕ್, ಆರಗ ಜ್ಞಾನೇಂದ್ರ, ಕೆ.ಸುಧಾಕರ್ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ಕಾಣೆಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.