ADVERTISEMENT

Covid-19 Karnataka Update: ಒಂದೇ ದಿನದಲ್ಲಿ 257 ಹೊಸ ಪ್ರಕರಣ, ನಾಲ್ವರ ಸಾವು

​ಪ್ರಜಾವಾಣಿ ವಾರ್ತೆ
Published 4 ಜೂನ್ 2020, 14:03 IST
Last Updated 4 ಜೂನ್ 2020, 14:03 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಜೂನ್‌ 03ರ ಸಂಜೆ 5 ಗಂಟೆಯಿಂದ ಜೂನ್‌ 04ರ ಸಂಜೆ 5 ಗಂಟೆವರೆಗೆ 257 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ನಾಲ್ವರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,320ಕ್ಕೆ ತಲುಪಿದ್ದು, ಕೊರೊನಾ ಸೋಂಕಿನಿಂದ ಈವರೆಗೂ 57 ಮಂದಿ ಸಾವಿಗೀಡಾಗಿದ್ದಾರೆ.

1,610 ಜನರು ಸೋಂಕಿನಿಂದ ಗುಣಮುಖರಾಗಿದ್ದು, 2,651ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ.

ADVERTISEMENT

13 ಕೊರೊನಾ ಪೀಡಿತರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.

ಉಡುಪಿಯಲ್ಲಿ 92, ರಾಯಚೂರಿನಲ್ಲಿ 88, ಹಾಸನ ಹಾಗೂ ಮಂಡ್ಯದಲ್ಲಿ 15, ದಾವಣಗೆರೆಯಲ್ಲಿ 13 , ಬೆಳಗಾವಿ 12 ಮತ್ತು ಬೆಂಗಳೂರು ನಗರದಲ್ಲಿ 09 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.