ಬೆಂಗಳೂರು:ಮೇ 29ರ ಸಂಜೆ 5 ಗಂಟೆಯಿಂದ ಮೇ 30ರ ಸಂಜೆ 5 ಗಂಟೆವರೆಗೆಕೋವಿಡ್-19ಗೆ ಸಂಬಂಧಿಸಿದ141 ಹೊಸ ಪ್ರಕರಣಗಳು ದೃಢ ಪಟ್ಟಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿರುವುದಾಗಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ2,922ಕ್ಕೆ ಮತ್ತು ಸಾವಿನ ಸಂಖ್ಯೆ 48ಕ್ಕೆ ಏರಿಕೆಯಾಗಿದೆ. ಉಳಿದಂತೆ 997 ಜನರು ಗುಣಮುಖರಾಗಿದ್ದು, 1,874 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. 15 ರೋಗಿಗಳ ಸಂಖ್ಯೆ ಗಂಭೀರವಾಗಿದ್ದು, ಐಸಿಯುನಲ್ಲಿ ಇರಿಸಲಾಗಿದೆ.
ಇಂದು ಬೆಂಗಳೂರು ನಗರದಲ್ಲಿ 33, ಯಾದಗಿರಿಯಲ್ಲಿ 18, ದಕ್ಷಿಣ ಕನ್ನಡದಲ್ಲಿ 14, ಹಾಸನ ಮತ್ತು ಉಡುಪಿಯಲ್ಲಿ ತಲಾ 13, ವಿಜಯಪುರದಲ್ಲಿ 11, ಬೀದರ್ನಲ್ಲಿ 10, ಶಿವಮೊಗ್ಗದಲ್ಲಿ 6, ಹಾವೇರಿ ಮತ್ತು ದಾವಣಗೆರೆಯಲ್ಲಿ ತಲಾ 4, ಕೋಲಾರದಲ್ಲಿ 3,ಉತ್ತರ ಕನ್ನಡ, ಧಾರವಾಡ, ಮೈಸೂರು ಮತ್ತುಕಲಬುರಗಿಯಲ್ಲಿ ತಲಾ 2, ಚಿತ್ರದುರ್ಗ, ತುಮಕೂರು, ಬೆಳಗಾವಿ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ತಲಾ1 ಪ್ರಕರಣಗಳು ಪತ್ತೆಯಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.