ಬೆಂಗಳೂರು: ಕೊರೊನಾ ವೈರಸ್ ಸೋಂಕಿಗೆ ರಾಜ್ಯದ ವಿವಿಧೆಡೆ ಮೇ 16ರ ಸಂಜೆ 5ರಿಂದ ಮೇ 17ರ ಸಂಜೆ 5ರ ಅವಧಿಯಲ್ಲಿ ಒಟ್ಟು 55ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1147ಕ್ಕೆ ಮುಟ್ಟಿದೆ. ಈವರೆಗೆ 37 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿಮಂಡ್ಯ ಜಿಲ್ಲೆಯ22ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.
ಮಂಡ್ಯದಲ್ಲಿ 22,ಕಲಬುರ್ಗಿದಲ್ಲಿ 10, ಹಾಸನದಲ್ಲಿ 6, ಯಾದಗಿರಿದಲ್ಲಿ 3, ಕೋಲಾರದಲ್ಲಿ 3, ದಕ್ಷಿಣ ಕನ್ನಡದಲ್ಲಿ 2, ಧಾರವಾಡದಲ್ಲಿ 4, ಶಿವಮೊಗ್ಗದಲ್ಲಿ 2,ವಿಜಯಪುರದಲ್ಲಿ 1, ಉಡುಪಿಯಲ್ಲಿ 1 ಹೊಸಪ್ರಕರಣಗಳು ಖಚಿತವಾಗಿವೆ.
ಮಂಡ್ಯ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ22ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 72ಕ್ಕೆ ಏರಿಕೆಯಾಗಿದೆ.ಇವರೆಲ್ಲರೂ ಮುಂಬೈ ವಲಸಿಗರೆಂದು ತಿಳಿದುಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.