ADVERTISEMENT

Karnataka Covid-19 Update: ತಗ್ಗಿದ ಸಕ್ರಿಯ ಪ್ರಕರಣ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2021, 19:26 IST
Last Updated 17 ಡಿಸೆಂಬರ್ 2021, 19:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಸಕ್ರಿಯ ಪ್ರಕರಣಗಳು ಇಳಿಕೆಯಾಗಿವೆ. ಸದ್ಯ 7,076 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಂಕಿತರ ಹೊಸ ಪ್ರಕರಣಗಳೂ ತಗ್ಗಿವೆ. ಶುಕ್ರವಾರ 238 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಒಟ್ಟು ಸಂಖ್ಯೆ 30.01 ಲಕ್ಷ ದಾಟಿದೆ. ಸೋಂಕು ದೃಢ ಪ್ರಮಾಣವು ಶೇ 0.20ರಷ್ಟಿದೆ.

ಒಂದು ದಿನದಲ್ಲಿ 317 ಜನರಿಗೆ ಕಾಯಿಲೆ ವಾಸಿಯಾಗಿದ್ದು, ಈವರೆಗೆ 29.56 ಲಕ್ಷ ಮಂದಿ ಚೇತರಿಸಿಕೊಂಡಂತಾಗಿದೆ.

ADVERTISEMENT

ಬೆಂಗಳೂರಿನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಒಬ್ಬರು ಅಸುನೀಗಿದ್ದಾರೆ. ಸಾವಿಗೀಡಾದವರ ಈವರೆಗಿನ ಸಂಖ್ಯೆ 38,282ಕ್ಕೆ ಹೆಚ್ಚಿದೆ. ಮರಣ ಪ್ರಮಾಣ ದರವು ಶೇ 1.26ರಷ್ಟು ವರದಿಯಾಗಿದೆ.

ಬೆಂಗಳೂರಿನಲ್ಲಿ ಹಿಂದಿನ 24 ಗಂಟೆಗಳಲ್ಲಿ 153 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ದಕ್ಷಿಣ ಕನ್ನಡ (19), ಕೊಡಗು (13) ಹಾಗೂ ಮೈಸೂರಿನಲ್ಲಿ (15) ಇದು ಎರಡಂಕಿಯಷ್ಟು ವರದಿಯಾಗಿದೆ. ಬಾಗಲಕೋಟೆ, ಬಳ್ಳಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸೇರಿದಂತೆ 14 ಜಿಲ್ಲೆಗಳಲ್ಲಿ ಸೋಂಕಿತರ ಹೊಸ ಪ್ರಕರಣಗಳು ದಾಖಲಾಗಿಲ್ಲ. 12 ಜಿಲ್ಲೆಗಳಲ್ಲಿ ಇದು ಒಂದಂಕಿಗೆ ಇಳಿದಿದೆ.

ಕೋವಿಡ್‌ ಪರೀಕ್ಷೆಗಳು ಏರಿದ್ದು, ಒಂದು ದಿನದಲ್ಲಿ 1.17 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.