ADVERTISEMENT

Karnataka Covid-19 Update: ರಾಜ್ಯದಲ್ಲಿಂದು 29,744 ಪ್ರಕರಣ, 201 ಸಾವು

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2021, 15:51 IST
Last Updated 26 ಏಪ್ರಿಲ್ 2021, 15:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆ ಅವಧಿಯಲ್ಲಿ 29,744 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 201 ಸೋಂಕಿತರು ಮೃತಪಟ್ಟಿದ್ದಾರೆ.

ಇಂದು (ಸೋಮವಾರ) 10,663 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ರಾಜ್ಯದಲ್ಲಿ ಈವರೆಗೆ ಸೋಂಕಿತರಾದವರ ಸಂಖ್ಯೆ 13,68,945ಕ್ಕೆ ಏರಿಕೆಯಾಗಿದೆ. ಒಟ್ಟು 14,627 ಮಂದಿ ಮೃತಪಟ್ಟಿದ್ದರೆ, 10,73,257 ಮಂದಿ ಚೇತರಿಸಿಕೊಂಡಿದ್ದಾರೆ.

ಸದ್ಯ ರಾಜ್ಯದಲ್ಲಿ 2,81,042 ಸಕ್ರಿಯ ಪ್ರಕರಣಗಳಿದ್ದು, 1,815 ಮಂದಿ ತೀವ್ರ ನಿಗಾ ಘಟಕಗಳಲ್ಲಿ ಚಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ನಗರದಲ್ಲಿ 16,545 ಹೊಸ ಪ್ರಕರಣಗಳು ದೃಢಪಟ್ಟಿದ್ದು, 105 ಮಂದಿ ಸಾವಿಗೀಡಾಗಿದ್ದಾರೆ.

ಹೊಸ ಕೋವಿಡ್ ಪ್ರಕರಣಗಳ ವಿವರ (ಜಿಲ್ಲಾವಾರು)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.