ADVERTISEMENT

Karnataka Covid-19 Update: ದಿನದ ಸೋಂಕಿತರ ಸಂಖ್ಯೆ 31 ಸಾವಿರಕ್ಕೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2022, 3:07 IST
Last Updated 29 ಜನವರಿ 2022, 3:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಈ ತಿಂಗಳು50 ಸಾವಿರದ ಗಡಿದಾಟಿದ್ದ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ, ಶುಕ್ರವಾರ 31,198ಕ್ಕೆ ಇಳಿಕೆಯಾಗಿದೆ.

ಕೋವಿಡ್‌ನಿಂದ ಚೇತರಿಸಿ ಕೊಳ್ಳುವವರ ಸಂಖ್ಯೆ ಮತ್ತಷ್ಟು ಹೆಚ್ಚಳ ವಾಗಿದೆ. ಸೋಂಕಿ ತರಲ್ಲಿ 71,092 ಮಂದಿ ಗುಣಮುಖ ರಾಗಿದ್ದಾರೆ. ಕೋವಿಡ್ ಕಾಣಿಸಿಕೊಂಡಾಗಿನಿಂದ ಈವರೆಗೆ 24 ಗಂಟೆಗಳ ಅವಧಿಯಲ್ಲಿ ಚೇತರಿಕೆ ಹೊಂದಿದವರ ಗರಿಷ್ಠ ಸಂಖ್ಯೆ ಇವಾಗಿವೆ. ಒಂದು ದಿನದ ಅವಧಿಯಲ್ಲಿ 1.49 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ.

ಸೋಂಕು ದೃಢ ಪ್ರಮಾಣ ಶೇ 20.91 ರಷ್ಟಿದೆ. ನಾಲ್ಕು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ನಾಲ್ಕು ಅಂಕಿ, 25 ಜಿಲ್ಲೆಗಳಲ್ಲಿ ಮೂರು ಅಂಕಿಯಲ್ಲಿದೆ. ಬೆಂಗಳೂರಿನಲ್ಲಿ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, 15,199 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಮೈಸೂರಿನಲ್ಲಿ 1,877, ಧಾರವಾಡದಲ್ಲಿ 1,500, ತುಮಕೂರಿನಲ್ಲಿ 1,315 ಹಾಗೂ ಹಾಸನದಲ್ಲಿ 1,037 ಮಂದಿಹೊಸದಾಗಿ ಸೋಂಕಿತ ರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಸಾವಿರಕ್ಕಿಂತ ಕಡಿಮೆ ಇವೆ. ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 37.23 ಲಕ್ಷಕ್ಕೆ ಏರಿಕೆಯಾಗಿದೆ.

ADVERTISEMENT

ಸಕ್ರಿಯ ಪ್ರಕರಣಗಳ ಸಂಖ್ಯೆ 2.88 ಲಕ್ಷಕ್ಕೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿಯೇ 1.60 ಲಕ್ಷ ಸೋಂಕಿತರು ಇದ್ದಾರೆ. ಕೋವಿಡ್‌ನಿಂದ ಶುಕ್ರವಾರ ಚೇತರಿಸಿಕೊಂಡವರಲ್ಲಿ 44,866 ಮಂದಿ ಬೆಂಗಳೂರಿನವರೆ ಆಗಿದ್ದಾರೆ. ರಾಜ್ಯದಲ್ಲಿಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 33.96 ಲಕ್ಷಕ್ಕೆ ತಲುಪಿದೆ. 50 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.