ADVERTISEMENT

Karnataka Covid Updates: ಸಕ್ರಿಯ ಪ್ರಕರಣ 7,547ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2022, 5:26 IST
Last Updated 26 ಜುಲೈ 2022, 5:26 IST
   

ಬೆಂಗಳೂರು: ನಗರದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಸೋಂಕಿತರ ಸಂಖ್ಯೆ 7,547ಕ್ಕೆ ತಲುಪಿದೆ.

ಸೋಮವಾರ 813 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಸೋಂಕಿತರಲ್ಲಿ ಹೊಸದಾಗಿ 999 ಮಂದಿ ಚೇತರಿಸಿಕೊಂಡಿದ್ದಾರೆ. 76 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಅವರು ತೀವ್ರ ಉಸಿರಾಟದ ಸಮಸ್ಯೆಯನ್ನು ಎದುರಿಸುತ್ತಿದ್ದರು.

ಸೋಂಕಿತರಲ್ಲಿ ಸದ್ಯ 34 ಮಂದಿ ಆಸ್ಪತ್ರೆ ಚಿಕಿತ್ಸೆಗೆ ಒಳಗಾಗಿದ್ದಾರೆ. 28 ಮಂದಿ ಸಾಮಾನ್ಯ ಹಾಸಿಗೆ ಹಾಗೂ ಆರು ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಉಳಿದವರು ಮನೆ ಆರೈಕೆಯಲ್ಲಿಯೇ ಚೇತರಿಸಿಕೊಳ್ಳುತ್ತಿದ್ದಾರೆ.

ADVERTISEMENT

ನಗರದಲ್ಲಿ ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 18.28 ಲಕ್ಷಕ್ಕೆ ತಲುಪಿದೆ. ಅವರಲ್ಲಿ ಈಗಾಗಲೇ 18.03 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. ಸೋಂಕಿತರಲ್ಲಿ ಮೃತರ ಸಂಖ್ಯೆ 16,973ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.