ADVERTISEMENT

Covid-19 Karnataka update: 24 ಗಂಟೆಗಳಲ್ಲಿ 4,996 ಮಂದಿ ಗುಣಮುಖ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಆಗಸ್ಟ್ 2020, 15:35 IST
Last Updated 23 ಆಗಸ್ಟ್ 2020, 15:35 IST
ಕೊರೊನಾ ವೈರಸ್ ಸೋಂಕು ಪರೀಕ್ಷೆ– ಸಂಗ್ರಹ ಚಿತ್ರ
ಕೊರೊನಾ ವೈರಸ್ ಸೋಂಕು ಪರೀಕ್ಷೆ– ಸಂಗ್ರಹ ಚಿತ್ರ   
""

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 5,938 ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 4,996 ಮಂದಿ ಗುಣಮುಖರಾಗಿದ್ದಾರೆ.

ಪ್ರಸ್ತುತ 83,551 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 2,77,814 ತಲುಪಿದೆ.ಈ ಪೈಕಿ 1,89,564 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್‌ ಸೋಂಕಿನಿಂದ 68 ಮಂದಿ ಸಾವಿಗೀಡಾಗಿದ್ದಾರೆ ಹಾಗೂ ಈವರೆಗೂ 4,683 ಮಂದಿ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ 2,126 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ ಸೋಂಕಿನಿಂದ ಐವರು ಮೃತಪಟ್ಟಿದ್ದಾರೆ. ಇದೇ ಅವಧಿಯಲ್ಲಿ 1,468 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ADVERTISEMENT

ಬಳ್ಳಾರಿಯಲ್ಲಿ 406 ಪ್ರಕರಣಗಳು, 304 ಮಂದಿ ಗುಣಮುಖ ಹಾಗೂ 7 ಜನ ಸಾವಿಗೀಡಾಗಿದ್ದಾರೆ. ದಾವಣೆಗೆರೆಯಲ್ಲಿ 265 ಪ್ರಕರಣಗಳು, 178 ಜನ ಗುಣಮುಖ ಹಾಗೂ ಇಬ್ಬರು ಮೃತಪಟ್ಟಿದ್ದಾರೆ. ಕೊಪ್ಪಳದಲ್ಲಿ 256 ಪ್ರಕರಣಗಳು, 177 ಮಂದ ಗುಣಮುಖ ಹಾಗೂ 5 ಮಂದಿ ಸಾವಿಗೀಡಾಗಿದ್ದಾರೆ. ಶಿವಮೊಗ್ಗದಲ್ಲಿ 246 ಪ್ರಕರಣಗಳು, 271 ಮಂದಿ ಗುಣಮುಖ ಹಾಗೂ 4 ಮಂದಿ ಮೃತಪಟ್ಟಿರುವುದು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.