ADVERTISEMENT

Covid-19 Karnataka Update: 1 ಲಕ್ಷ ಸಕ್ರಿಯ ಪ್ರಕರಣ, 3.22 ಲಕ್ಷ ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2020, 13:54 IST
Last Updated 10 ಸೆಪ್ಟೆಂಬರ್ 2020, 13:54 IST
ರ್‍ಯಾಪಿಡ್ ಆ್ಯಂಟಿಜೆನ್‌ ಟೆಸ್ಟ್ ಮೂಲಕ ಕೋವಿಡ್‌ ಪರೀಕ್ಷೆ ಮಾಡುತ್ತಿರುವುದು–ಸಾಂದರ್ಭಿಕ
ರ್‍ಯಾಪಿಡ್ ಆ್ಯಂಟಿಜೆನ್‌ ಟೆಸ್ಟ್ ಮೂಲಕ ಕೋವಿಡ್‌ ಪರೀಕ್ಷೆ ಮಾಡುತ್ತಿರುವುದು–ಸಾಂದರ್ಭಿಕ    
""

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನಿಂದ 7,021 ಮಂದಿ ಗುಣಮುಖರಾಗಿದ್ದಾರೆ ಹಾಗೂ ಕೋವಿಡ್–19 ದೃಢಪಟ್ಟ 9,217 ಹೊಸ ಪ್ರಕರಣಗಳು ದಾಖಲಾಗಿವೆ.

ಪ್ರಸ್ತುತ ರಾಜ್ಯದಲ್ಲಿ 1,01,537 ಕೋವಿಡ್‌ ಸಕ್ರಿಯ ಪ್ರಕರಣಗಳಿದ್ದು, ಈವರೆಗೂ 3,22,454 ಜನ ಗುಣಮುಖರಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದ 129 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು 4,30,947 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 6,937 ಮಂದಿ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ಬೆಂಗಳೂರಿನಲ್ಲಿ 3,161 ಹೊಸ ಪ್ರಕರಣಗಳು ದಾಖಲಾಗಿವೆ, 33 ಮಂದಿ ಸಾವಿಗೀಡಾಗಿದ್ದಾರೆ ಹಾಗೂ 1,672 ಜನ ಗುಣಮುಖರಾಗಿದ್ದಾರೆ. ಒಟ್ಟು 1,60,205 ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ದಾಖಲಾಗಿವೆ.

ಮೈಸೂರಿನಲ್ಲಿ 635 ಹೊಸ ಪ್ರಕರಣಗಳು ದಾಖಲಾಗಿದ್ದು, 13 ಮಂದಿ ಸಾವಿಗೀಡಾಗಿದ್ದಾರೆ. 499 ಮಂದಿ ಗುಣಮುಖರಾಗಿದ್ದಾರೆ. ಬಳ್ಳಾರಿಯಲ್ಲಿ 375 ಹೊಸ ಪ್ರಕರಣಗಳು, 7 ಜನ ಮೃತಪಟ್ಟಿದ್ದಾರೆ ಹಾಗೂ 415 ಮಂದಿ ಗುಣಮುಖರಾಗಿದ್ದಾರೆ.

ಶಿವಮೊಗ್ಗದಲ್ಲಿ 549 ಪ್ರಕರಣಗಳು (ಎರಡು ದಿನಗಳು ಸೇರಿ) ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.