ADVERTISEMENT

ಸಿ.ಟಿ. ರವಿ ಬಂಧನ | ಪೊಲೀಸ್ ಕ್ರಮದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಡಿ.ಕೆ.ಶಿವಕುಮಾರ್

ಪಿಟಿಐ
Published 20 ಡಿಸೆಂಬರ್ 2024, 5:19 IST
Last Updated 20 ಡಿಸೆಂಬರ್ 2024, 5:19 IST
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್   

ಬೆಂಗಳೂರು: ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಸಿ.ಟಿ. ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕ್ರಮದಲ್ಲಿ ಯಾವುದೇ ಹಸ್ತಕ್ಷೇಪ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು (ಶುಕ್ರವಾರ) ಸ್ಪಷ್ಟಪಡಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಅವಾಚ್ಯ ಪದ ಬಳಸಿ, ನಿಂದಿಸಿದ ಪ್ರಕರಣದಲ್ಲಿ ಸಿ.ಟಿ. ರವಿ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದರು.

ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ಹಸ್ತಕ್ಷೇಪದ ವಿರುದ್ಧ ಬಿಜೆಪಿ ಆರೋಪ ಮಾಡಿತ್ತು.

ADVERTISEMENT

ಆದರೆ ಪೊಲೀಸ್ ಕ್ರಮದಲ್ಲಿ ಯಾವುದೇ ಹಸ್ತಕ್ಷೇಪ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

'ಈ ಹಿಂದೆಯೂ ಹಲವು ನಾಯಕರ ವಿರುದ್ಧವೂ ಸಿ.ಟಿ. ರವಿ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ' ಎಂದು ಅವರು ಆರೋಪಿಸಿದ್ದಾರೆ.

'ಪೊಲೀಸರು ಅತ್ಯಂತ ಸೌಜನ್ಯವಾಗಿ ವರ್ತಿಸಿದ್ದಾರೆ. ಆದರೆ ಬಿಜೆಪಿಯವರು ಖಾನಾಪುರ ಪೊಲೀಸ್ ಠಾಣೆಗೆ ಹೋಗಿ ಸಭೆ ನಡೆಸುತ್ತಾರಾ? ಪೊಲೀಸರ ಕ್ರಮವೂ ಸರಿಯಾಗಿಲ್ಲ. ಬಿಜೆಪಿ ನಾಯಕರು ಸಿ.ಟಿ. ರವಿ ಅವರನ್ನು ಭೇಟಿಯಾಗಲು ಹೇಗೆ ಅವಕಾಶ ಮಾಡಿಕೊಟ್ಟರು? ಸರ್ಕಾರ ಯಾವುದರಲ್ಲೂ ಹಸ್ತಕ್ಷೇಪ ಮಾಡಿಲ್ಲ' ಎಂದು ಅವರು ತಿಳಿಸಿದ್ದಾರೆ.

'ಕುಟುಂಬ ಸದಸ್ಯರು ಒಂದಿಬ್ಬರು ಹೋಗಿ ಭೇಟಿಯಾಗಬಹುದು. ಆದರೆ ಅವರು (ಬಿಜೆಪಿ) ಪೊಲೀಸ್ ಠಾಣೆಯಲ್ಲಿ ಸಭೆ ನಡೆಸುತ್ತಿದ್ದರು. ಹಾಗಿದ್ದರೆ ಕೊಲ್ಲಲು ಯತ್ನಿಸಿದ ಆರೋಪವೇನು' ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.