ADVERTISEMENT

ವಿದ್ಯಾರ್ಥಿಗಳ ಸವಲತ್ತಿಗೂ ಆಧಾರ್‌ ಕಡ್ಡಾಯ: ಶಿಕ್ಷಣ ಇಲಾಖೆ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2023, 23:45 IST
Last Updated 28 ಫೆಬ್ರುವರಿ 2023, 23:45 IST
   

ಬೆಂಗಳೂರು: ಶಾಲಾ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಮತ್ತು ಇತರೆ ಸರ್ಕಾರಿ ಸವಲತ್ತು ಪಡೆಯಲು ಎಸ್‌ಎಟಿಎಸ್‌ ತಂತ್ರಾಂಶದೊಂದಿಗೆ (ವಿದ್ಯಾರ್ಥಿ ಸಾಮರ್ಥ್ಯ ಪತ್ತೆ ವ್ಯವಸ್ಥೆ) ಆಧಾರ್ ಜೋಡಣೆ ಮಾಡುವುದನ್ನು ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯ ಎಲ್ಲ ವಿದ್ಯಾರ್ಥಿಗಳಿಂದ ಆಧಾರ್‌ ಕಾರ್ಡ್‌ಗಳನ್ನು ಸಂಗ್ರಹಿಸಿ, ತಂತ್ರಾಂಶದೊಂದಿಗೆ ಜೋಡಣೆ ಮಾಡಬೇಕು. ಖಾಸಗಿ ಶಾಲೆಯ ವಿದ್ಯಾರ್ಥಿಗಳ ಆಧಾರ್‌ ಜೋಡಣೆಗೂ ಮೊದಲು ಅವರಿಂದ ಒಪ್ಪಿಗೆ ಪತ್ರ ಪಡೆಯಬೇಕು ಎಂದು ಸೂಚಿಸಲಾಗಿದೆ.

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ನೀಡುವ ವಿದ್ಯಾರ್ಥಿ ವೇತನವನ್ನು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‌ ಮೂಲಕ ವಿತರಿಸಲಾಗುತ್ತಿದೆ. ಅರ್ಹ ವಿದ್ಯಾರ್ಥಿಗಳಿಗೆ ವೇತನ ತಲುಪಲು, ವಿವಿಧ ಪ್ರವೇಶ ಪರೀಕ್ಷೆಗಳ ಹಾಜರಾತಿಗೆ ಆಧಾರ್‌ನಲ್ಲಿರುವಂತೆ ವಿದ್ಯಾರ್ಥಿ ಹೆಸರು ನಮೂದಿಸಲಾಗುವುದು ಎಂದು ವಿವರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.