ADVERTISEMENT

ರಾಜ್ಯ ಬಿಜೆಪಿ ಕಚೇರಿಯಲ್ಲಿ 'ಹನುಮಾನ್ ಚಾಲೀಸ' ಪಠಣ

​ಪ್ರಜಾವಾಣಿ ವಾರ್ತೆ
Published 9 ಮೇ 2023, 7:45 IST
Last Updated 9 ಮೇ 2023, 7:45 IST
ಬಿಜೆಪಿ ಕಚೇರಿಯಲ್ಲಿ ಹನುಮಾನ್‌ ಚಾಲೀಸಾ ಪಠಣ ಮಾಡುತ್ತಿರುವ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು ಮತ್ತಿತ್ತರು.
ಬಿಜೆಪಿ ಕಚೇರಿಯಲ್ಲಿ ಹನುಮಾನ್‌ ಚಾಲೀಸಾ ಪಠಣ ಮಾಡುತ್ತಿರುವ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು ಮತ್ತಿತ್ತರು.   

ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಾಲಯ 'ಜಗನ್ನಾಥ ಭವನ' ದಲ್ಲಿ ಇಂದು ಪಕ್ಷದ ಪ್ರಮುಖ ಮುಖಂಡರು ಮತ್ತು ಕಾರ್ಯಕರ್ತರು ಹನುಮಾನ್ ಚಾಲೀಸ ಪಠಿಸಿದರು.

ಶ್ರೀ ಗಣಪತಿ ಸ್ತ್ರೋತ್ರ ಪಠಣ, ಭಾರತ ಮಾತೆಗೆ ಪೂಜೆ, ಹನುಮಾನ್ ಚಾಲೀಸ ಪಠಣ ಮಾಡಲಾಯಿತು. ರಾಜ್ಯ, ದೇಶ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಪ್ರಕಾಶನ ಪ್ರಕೋಷ್ಠದ ರಾಜ್ಯ ಸಂಚಾಲಕ ಬಿದರೆ ಪ್ರಕಾಶ್, ಪಕ್ಷದ ಮುಖಂಡರು ಮತ್ತು ಕಾರ್ಯಾಲಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.