ADVERTISEMENT

ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಬಿಜೆಪಿ ಸೇರ್ಪಡೆ: ಎಎಪಿಗೆ ಗುಡ್‌ ಬೈ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2023, 13:40 IST
Last Updated 28 ಫೆಬ್ರುವರಿ 2023, 13:40 IST
ಭಾಸ್ಕರ್ ರಾವ್
ಭಾಸ್ಕರ್ ರಾವ್    

ಬೆಂಗಳೂರು: ನಿವೃತ್ತ ಐಪಿಎಸ್‌ ಅಧಿಕಾರಿ ಹಾಗೂ ಆಮ್‌ ಆದ್ಮಿ ಪಕ್ಷದ ಮುಖಂಡ ಭಾಸ್ಕರ್ ರಾವ್ ಅವರು ಬುಧವಾರ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರು ಮಂಗಳವಾರ ಕಂದಾಯ ಸಚಿವ ಆರ್‌.ಅಶೋಕ ಅವರನ್ನು ಭೇಟಿ ಮಾಡಿದ್ದರು. ಬಳಿಕ ಅವರು ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಸೇರಿ ಹಲವು ನಾಯಕರ ಜತೆ ಮಾತುಕತೆ ನಡೆಸಿದರು.

ತಾವು ಬಿಜೆಪಿ ಸೇರುತ್ತಿರುವುದು ನಿಜ. ನಾಳೆಯೇ ಸೇರ್ಪಡೆಗೊಳ್ಳಲಿದ್ದೇನೆ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ರಾಜಕೀಯ ಪಕ್ಷ ಸೇರಿ ಚುನಾವಣೆ ಸ್ಪರ್ಧಿಸುವ ಉದ್ದೇಶದಿಂದ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಸ್ವೀಕಾರಗೊಂಡ ಬಳಿಕ ಅವರು ಆಮ್‌ಆದ್ಮಿ ಪಕ್ಷ ಸೇರಿದ್ದರು. ಬಸವನಗುಡಿಯಿಂದ ಸ್ಪರ್ಧಿಸುವ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಆರಂಭದಲ್ಲಿ ಅವರು ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷವನ್ನು ಟೀಕಿಸುತ್ತಿದ್ದರು ಮತ್ತು ಪಕ್ಷದಲ್ಲೂ ಸಕ್ರಿಯರಾಗಿದ್ದರು. ಆದರೆ ಕಳೆದ ಒಂದೆರಡು ತಿಂಗಳಿಂದ ಅವರು ಪಕ್ಷದಲ್ಲಿ ಅಷ್ಟಾಗಿ ಸಕ್ರಿಯರಾಗಿರಲಿಲ್ಲ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.