ADVERTISEMENT

ಭರವಸೆ ಈಡೇರಿಸದಿದ್ದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 22 ಜನವರಿ 2023, 13:20 IST
Last Updated 22 ಜನವರಿ 2023, 13:20 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಹಾಸನ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್, ಕುಟುಂಬದ ಯಜಮಾನಿಗೆ ₹2 ಸಾವಿರ ಸಹಾಯಧನ, 10 ಕೆ.ಜಿ. ಅಕ್ಕಿಯನ್ನು ಕೊಡುವುದಾಗಿ ಭರವಸೆ ನೀಡಿದ್ದೇವೆ.‌ ಅದನ್ನು‌ ಈಡೇರಿಸುತ್ತೇವೆ. ಒಂದು‌ ವೇಳೆ‌ ಈಡೇರಿಸದೇ ಹೋದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇವೆ’ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ‌ ಹೇಳಿದರು.

ಇಲ್ಲಿ ಶನಿವಾರ ನಡೆದ ‘ಪ್ರಜಾಧ್ವನಿ‌’ ಯಾತ್ರೆಯಲ್ಲಿ‌ ಮಾತನಾಡಿರುವ ಅವರು, ‘ಈ ಬಗ್ಗೆ ಜಿಲ್ಲೆಯ ಪ್ರತಿಯೊಬ್ಬರಿಗೆ ಪಕ್ಷದ ಕಾರ್ಯಕರ್ತರೂ ಮನವರಿಕೆ ಮಾಡಿಕೊಡಬೇಕು. ಜಿಲ್ಲೆಯಲ್ಲಿ ಕನಿಷ್ಠ‌ 5 ಸ್ಥಾನಗಳನ್ನು‌ ಗೆಲ್ಲಲೇಬೇಕು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT