ADVERTISEMENT

ಭೂಪಟದಲ್ಲಿ ಮೈಸೂರು, ಕರಾವಳಿಗೆ ಕತ್ತರಿ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಗರಂ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಜುಲೈ 2022, 5:56 IST
Last Updated 13 ಜುಲೈ 2022, 5:56 IST
ಸಿದ್ದರಾಮೋತ್ಸವ ಕಾರ್ಯಕ್ರಮದ ಪ್ರಚಾರಕ್ಕೆ ಬಳಸುತ್ತಿರುವ ಕಾರು
ಸಿದ್ದರಾಮೋತ್ಸವ ಕಾರ್ಯಕ್ರಮದ ಪ್ರಚಾರಕ್ಕೆ ಬಳಸುತ್ತಿರುವ ಕಾರು   

‌ಬೆಂಗಳೂರು: ಮೈಸೂರು ಜಿಲ್ಲೆಯಲ್ಲಿ ಕಂಡ ಅಪಮಾನಕರ ಸೋಲು, ಕರಾವಳಿ ಭಾಗದಲ್ಲಿ ಕಾಂಗ್ರೆಸ್‌ ದುರ್ಬಲವಾಗಿರುವುದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ನಿದ್ದೆಗೆಡಿಸಿದೆ ಎಂದು ಬಿಜೆಪಿ ಟೀಕಿಸಿದೆ.

ಸಿದ್ದರಾಮಯ್ಯ ಅವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಆಗಸ್ಟ್‌ 3ರಂದು ಸಿದ್ದರಾಮೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದೆ. ಕಾರ್ಯಕ್ರಮದ ಕುರಿತಾಗಿ ಪ್ರಚಾರಕ್ಕೆ ಬಳಸುತ್ತಿರುವ ಕಾರುಗಳ ಮೇಲೆ ಕರ್ನಾಟಕದ ಭೂಪಟವನ್ನು ಚಿತ್ರಿಸಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ‘ಮೈಸೂರು ಜಿಲ್ಲೆಯಲ್ಲಿ ಕಂಡ ಅಪಮಾನಕರ ಸೋಲು, ಕರಾವಳಿ ಭಾಗದಲ್ಲಿ ಕಾಂಗ್ರೆಸ್‌ ದುರ್ಬಲವಾಗಿರುವುದು ಸಿದ್ದರಾಮಯ್ಯ ಅವರಿಗೆ ನಿದ್ದೆಗೆಡಿಸಿದೆ. ಇದರ ಕೋಪವನ್ನು ಕರ್ನಾಟಕದ ಭೂಪಟದ ಮೇಲೆ ತೋರಿಸಿ, ಮೈಸೂರು ಹಾಗೂ ಕರಾವಳಿ ಭಾಗಕ್ಕೆ ಕತ್ತರಿ ಹಾಕಿದ್ದಾರೆ. ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ಭೂಪಟವನ್ನು ವಿರೂಪಗೊಳಿಸಿದ್ದು ಕನ್ನಡಿಗರಿಗೆ ಮಾಡಿದ ಅವಮಾನ’ ಎಂದು ವಾಗ್ದಾಳಿ ನಡೆಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.