ADVERTISEMENT

ಅರಣ್ಯ ಅಭಿವೃದ್ಧಿ ನಿಗಮದಿಂದ ಕನ್ನಡ ಕಡೆಗಣನೆ

ಲೋಪ ಸರಿಪಡಿಸಿಕೊಳ್ಳಲು ತಿಂಗಳ ಗಡುವು ನೀಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 22:32 IST
Last Updated 6 ಆಗಸ್ಟ್ 2020, 22:32 IST
ಟಿ.ಎಸ್.ನಾಗಾಭರಣ
ಟಿ.ಎಸ್.ನಾಗಾಭರಣ   

ಬೆಂಗಳೂರು: ‘ಜಾಲತಾಣ ಸೇರಿದಂತೆ ಆಡಳಿತಾತ್ಮಕ ವ್ಯವಹಾರಗಳಲ್ಲಿ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ತಿಂಗಳೊಳಗೆ ಜಾರಿಗೊಳಿಸಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರುಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಧು ಶರ್ಮಾ ಅವರಿಗೆ ಸೂಚಿಸಿದರು.

ಆನ್‌ಲೈನ್ ವಿಡಿಯೋ ಸಂವಾದದ ಮೂಲಕ ಗುರುವಾರ ಅವರು ಕನ್ನಡ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ‘ಜಾಲತಾಣ ಸೇರಿದಂತೆ ವಿವಿಧೆಡೆ ಆಂಗ್ಲ ಭಾಷೆಯಲ್ಲಿ ಮಾಹಿತಿಗಳನ್ನು ಒದಗಿಸುತ್ತಿರುವುದು ಕೂಡ ಗಮನಕ್ಕೆ ಬಂದಿದೆ. ಕೂಡಲೇ ಲೋಪದೋಷಗಳನ್ನು ಸರಿಪಡಿಸಿಕೊಂಡು, ಎಲ್ಲ ಮಾಹಿತಿಗಳು ಕನ್ನಡದಲ್ಲಿ ಒದಗಿಸಲು ಕ್ರಮಕೈಗೊಳ್ಳಬೇಕು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT