ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ 33 ಸಚಿವರಿಗೆ ಹೊಸ ಇನ್ನೋವಾ ಕ್ರಿಸ್ಟಾ ಹೈಬ್ರಿಡ್ ಕಾರು ಖರೀದಿಸಲಾಗಿದೆ.
ರಾಜ್ಯದ 216 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರವೇ ಘೋಷಿಸಿರುವ ಈ ಸಮಯದಲ್ಲಿ ಸಚಿವರಿಗೆ ಐಷಾರಾಮಿ ಕಾರುಗಳನ್ನು ಖರೀದಿಸಲು ₹ 9.90 ಕೋಟಿ ವೆಚ್ಚ ಮಾಡಿರುವುದಕ್ಕೆ ಆಕ್ಷೇಪಗಳು ವ್ಯಕ್ತವಾಗಿವೆ.
ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಸಾಕಷ್ಟು ಹಣ ವೆಚ್ಚ ಮಾಡುತ್ತಿದೆ. ಇತರೆ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಎದುರಾಗಿದೆ. ಮತ್ತೊಂದೆಡೆ ರಾಜ್ಯ ಬರ ಪರಿಸ್ಥಿತಿಯತ್ತ ಸಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಸಚಿವರ ಐಷಾರಾಮಿ ಕಾರು ಖರೀದಿಗೆ ತಲಾ ₹30 ಲಕ್ಷ ವೆಚ್ಚ ಮಾಡುವ ಅಗತ್ಯವಿತ್ತೇ ಎಂದು ಹಲವರು ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.