ADVERTISEMENT

ಹೈಕೋರ್ಟ್: ಮೂವರು ನೂತನ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2021, 6:21 IST
Last Updated 8 ನವೆಂಬರ್ 2021, 6:21 IST
ನೂತನ ನ್ಯಾಯಮೂರ್ತಿ ಎಸ್.ರಾಚಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನ್ಯಾ. ಅನಂತ ರಾಮನಾಥ ಹೆಗಡೆ, ರಾಜ್ಯಪಾಲ ಥಾವರಚಂದ್ ಗೆಹಲೋತ್, ನ್ಯಾ. ಕೆ.ಎಸ್.ಹೇಮಲೇಖಾ ಹಾಗೂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ
ನೂತನ ನ್ಯಾಯಮೂರ್ತಿ ಎಸ್.ರಾಚಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನ್ಯಾ. ಅನಂತ ರಾಮನಾಥ ಹೆಗಡೆ, ರಾಜ್ಯಪಾಲ ಥಾವರಚಂದ್ ಗೆಹಲೋತ್, ನ್ಯಾ. ಕೆ.ಎಸ್.ಹೇಮಲೇಖಾ ಹಾಗೂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ   

ಬೆಂಗಳೂರು: ರಾಜ್ಯ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಅನಂತ ರಾಮನಾಥ ಹೆಗಡೆ, ಎಸ್.ರಾಚಯ್ಯ ಹಾಗೂ ಕೆ.ಎಸ್.ಹೇಮಲೇಖಾ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ಬೆಳಗ್ಗೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ರಾಜ್ಯ ಹೈಕೋರ್ಟ್‌ ನ್ಯಾಯಮೂರ್ತಿಗಳ ಮಂಜೂರಾತಿ ಸಂಖ್ಯೆ 62. ಹಾಲಿ 43 ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದು, ನೂತನ ಹೆಚ್ಚುವರಿ ನ್ಯಾಯಮೂರ್ತಿಗಳ ಸೇರ್ಪಡೆಯಿಂದಾಗಿ ಈ ಸಂಖ್ಯೆ ಈಗ 46ಕ್ಕೆ ಏರಿದೆ.

ADVERTISEMENT

ಮುಂದಿನ ತಿಂಗಳ, ಡಿಸೆಂಬರ್ 3ಕ್ಕೆ ನ್ಯಾಯಮೂರ್ತಿ ಎನ್.ಕೆ. ಸುಧೀಂದ್ರರಾವ್ ಅವರು ನಿವೃತ್ತರಾಗಲಿದ್ದಾರೆ.

ಸಮಾರಂಭದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳು, ಹಿರಿಯ ವಕೀಲರು, ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಎಲ್.ಶ್ರೀನಿವಾಸ್ ಬಾಬು, ಸದಸ್ಯರು, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್, ಪ್ರಧಾನ ಕಾರ್ಯದರ್ಶಿ ಎ.ಎನ್‌.ಗಂಗಾಧರಯ್ಯ ಖಜಾಂಚಿ ಶಿವಮೂರ್ತಿ ಹಾಗೂ ವಕೀಲ ವೃಂದದ ಗಣ್ಯರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.