ಬೆಂಗಳೂರು: ರಾಜ್ಯ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಡಾ.ಪಿ.ರವೀಂದ್ರನಾಥ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಸಲ್ಲಿಸಿದ್ದಾರೆ.
ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್ಇ) ಡಿಜಿಪಿ ಆಗಿದ್ದ ರವೀಂದ್ರನಾಥ್ ಅವರನ್ನು ಇತ್ತೀಚೆಗಷ್ಟೇ ಪೊಲೀಸ್ ತರಬೇತಿ ವಿಭಾಗಕ್ಕೆ ವರ್ಗಾಯಿಸಲಾಗಿತ್ತು. ಕುಟುಂಬದ ಕಾರ್ಯಕ್ರಮ ನಿಮಿತ್ತ ಕೆಲದಿನ ರಜೆ ಪಡೆದಿದ್ದ ರವೀಂದ್ರನಾಥ್, ಸೋಮವಾರ ಅಧಿಕಾರ ವಹಿಸಿಕೊಂಡಿದ್ದರು.
ಅರಮನೆ ರಸ್ತೆಯಲ್ಲಿರುವ ಪೊಲೀಸ್ ತರಬೇತಿ ವಿಭಾಗದ ಕಚೇರಿಗೆ ಮಂಗಳವಾರ ಬೆಳಿಗ್ಗೆ ಬಂದಿದ್ದ ರವೀಂದ್ರನಾಥ್, ಅಲ್ಲಿಂದ ವಿಧಾನಸೌಧಕ್ಕೆ ಹೋಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ರಾಜೀನಾಮೆ ಪತ್ರ ಸ್ವೀಕರಿಸಿರುವ ಕಾರ್ಯದರ್ಶಿ, ಮುಂದಿನ ಕ್ರಮಕ್ಕಾಗಿ ಪರಿಶೀಲಿಸುತ್ತಿದ್ದಾರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.