ಹುಬ್ಬಳ್ಳಿ: ಇಲ್ಲಿಯವರೆಗೆ ಹುಬ್ಬಳ್ಳಿ ಬಹಳ ಶಾಂತ ರೀತಿಯಲ್ಲಿದೆ. ಹಿಂದಿನ ದಿನಗಳು ಮತ್ತೆ ಮರುಕಳಿಸಬಾರದು. ರಾಜ್ಯದಲ್ಲಿ ಹುಬ್ಬಳ್ಳಿ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಬಾರದು. ಇದಕ್ಕೆ ಎಲ್ಲಾ ನಾಗರಿಕರು ಸಹಕರಿಸಬೇಕು. ಪ್ರತಿಯೊಬ್ಬರು ನಮ್ಮೂರು ಎಂಬುದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಊರಿನ ಅಭಿಮಾನ ಬೆಳೆಸಿಕೊಳ್ಳಬೇಕು.ನಗರದ ಮರ್ಯಾದೆಕಳೆಯಬಾರದು ಎಂಬುದು ಎಲ್ಲರ ಮನಸ್ಸಿನಲ್ಲಿ ಬರಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಒಡಕು ಮೂಡಿ, ಪ್ರಾಣಹಾನಿ ಮಾಡಿ ಹಾಗೂ ಆಸ್ತಿ ಹಾನಿ ಆಗಬಾರದು. ಆ ದೃಷ್ಟಿಯಲ್ಲಿ ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದರು.
ಗಲಭೆ ಕುರಿತು ಈಗಾಗಲೇ ಪೋಲಿಸ್ ಕಮಿಷನರ್ ಜೊತೆ ಮಾತನಾಡಿದ್ದೇನೆ. ಯಾರು ತಪ್ಪು ಮಾಡಿದ್ದಾರೊ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಮತ್ತೆ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಪೊಲೀಸ್ ಇಲಾಖೆಯ ಪಿಎಸ್ಐ ನೇಮಕಾತಿಅಕ್ರಮ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಪೊಲೀಸ್ ಪರೀಕ್ಷೆಗಳು ಸರಿಯಾದ ರೀತಿಯಲ್ಲಿ ನಡೆಯಬೇಕು. ಯಾಕೆಂದರೆ ನಾಡಿನ ರಕ್ಷಣೆ ಮಾಡುವವರು ಅವರೇ. ಹಾಗಾಗಿ, ಅಕ್ರಮಕ್ಕೆ ಅವಕಾಶವಿಲ್ಲದಂತೆ ಪರೀಕ್ಷೆ ನಡೆಸಬೇಕು ಎಂದರು.
ಇವನ್ನೂ ಓದಿ
*ಹುಬ್ಬಳ್ಳಿ ಗಲಭೆ: ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಏನಿತ್ತು?
*ಹುಬ್ಬಳ್ಳಿ ಗಲಭೆ: ಪೊಲೀಸ್ ಕಟ್ಟೆಚ್ಚರ- 89 ಮಂದಿ ಬಂಧನ
*ಹುಬ್ಬಳ್ಳಿ ಗಲಭೆಗೆಸಂಬಂಧಿಸಿದ ಎಲ್ಲರನ್ನೂ ಬಂಧಿಸಿದ್ದೇವೆ:ಸಿಎಂ ಬೊಮ್ಮಾಯಿ
*ಸುಟ್ಟ ಮನೆಯಲ್ಲಿ ಬೆಂಕಿ ಕಾಯಿಸಿಕೊಳ್ಳುವ ಕಾಂಗ್ರೆಸ್:ಸಚಿವ ಬಿ.ಸಿ.ಪಾಟೀಲ ಆಕ್ರೋಶ
*ಜಹಾಂಗಿರ್ಪುರಿ ಹಿಂಸಾಚಾರ: 20 ಜನರ ಬಂಧನ, ಪೊಲೀಸರಿಂದ ಶಾಂತಿಸಭೆ
*ಉತ್ತರಾಖಂಡ, ಆಂಧ್ರದಲ್ಲೂ ಹನುಮ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ
*ಕೋಮುಗಲಭೆಗೆ ಕಾರಣವಾದ ರಸ್ತೆ ಅಪಘಾತ; ಗುಜರಾತ್ನ ವಡೋದರದಲ್ಲಿ 19 ಜನರ ಬಂಧನ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.