ADVERTISEMENT

ಗಡಿಜಿಲ್ಲೆ ಕಲಬುರಗಿಯಲ್ಲಿ ಮಹಾರಾಷ್ಟ್ರ ಬಸ್‌ಗಳಿಗೆ ಮಸಿ ಬಳಿದು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2022, 14:16 IST
Last Updated 25 ನವೆಂಬರ್ 2022, 14:16 IST
   

ಅಫಜಲಪುರ (ಕಲಬುರಗಿ ಜಿಲ್ಲೆ): ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‌ಗಳಿಗೆ ಮಸಿ ಬಳಿದಿರುವುದನ್ನು ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ತಾಲ್ಲೂಕಿನ ಬಳೂರ್ಗಿ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಹಾರಾಷ್ಟ್ರದ ಅಕ್ಕಲಕೋಟದಿಂದ ಅಫಜಲಪುರಕ್ಕೆ ಬರುತ್ತಿದ್ದ ಬಸ್‌ ತಡೆದು ಬಸ್‌ಗೆ ಮಸಿ ಬಳಿದು ಪ್ರತಿಭಟನೆ ನಡೆಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ಜಮಾದಾರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಪ್ರತಿಭಟನಾಕಾರರು, ‘ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು, ಹಿಡಿ ಮಣ್ಣು ಮಹಾರಾಷ್ಟ್ರಕ್ಕೆ ನೀಡುವುದಿಲ್ಲ. ಸೋಲಾಪುರ, ಅಕ್ಕಲಕೋಟ, ಜತ್ತ ಈ ನಗರಗಳು ಕರ್ನಾಟಕಕ್ಕೆ ಸೇರಿದ್ದು, ನಾವು ಎಂದಿಗೂ ಬಿಡುವುದಿಲ್ಲ ಪಡೆದೇ ತೀರುತ್ತೇವೆ. ಯಾವುದೇ ಕಾಲಕ್ಕೂ ಬೆಳಗಾವಿ ಜಿಲ್ಲೆಯನ್ನು ಬಿಟ್ಟು ಕೊಡುವುದಿಲ್ಲ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT