ADVERTISEMENT

ಮಧ್ಯರಾತ್ರಿ ಬಂದು, ಎದ್ದು ಹೋಗಿದ್ದು ಗ್ರಾಮ ವಾಸ್ತವ್ಯವೇ: ಬೊಮ್ಮಾಯಿ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2021, 16:12 IST
Last Updated 20 ಮಾರ್ಚ್ 2021, 16:12 IST
ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗಿಯಾದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಜಿಲ್ಲಾಧಿಕಾರಿ ನಿತೇಶ್ ‌ಪಾಟೀಲ ಸನ್ಮಾನಿಸಿದರು
ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗಿಯಾದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಜಿಲ್ಲಾಧಿಕಾರಿ ನಿತೇಶ್ ‌ಪಾಟೀಲ ಸನ್ಮಾನಿಸಿದರು   

ಹುಬ್ಬಳ್ಳಿ: ಇಲಾಖೆಯ ಆಡಳಿತವನ್ನು ಜನರ ಮನೆ ಬಾಗಿಲಿಗೆ ತಂದಿರುವ ಕಂದಾಯ ಸಚಿವ ಅಶೋಕ ಮಾಡುತ್ತಿರುವ ಕೆಲಸವೇ ನಿಜವಾದ ಗ್ರಾಮ ವಾಸ್ತವ್ಯ. ಹಿಂದೆ ಕೆಲ ಜನಪ್ರತಿನಿಧಿಗಳು ಮಧ್ಯರಾತ್ರಿ ಬಂದು ಬೆಳಿಗ್ಗೆ ಎದ್ದು ಹೋಗಿದ್ದು ಗ್ರಾಮ ವಾಸ್ತವ್ಯವೇ? ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.

ಹುಬ್ಬಳ್ಳಿ ತಾಲ್ಲೂಕಿನ ‌ಛಬ್ಬಿ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ವಾಸ್ತವ್ಯ ‌ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮೊದಲೆಲ್ಲ ತಮಗೆ ಬರಬೇಕಾದ ಸೌಲಭ್ಯಗಳನ್ನು ಪಡೆದುಕೊಳ್ಳಲು ಜನ ಸರ್ಕಾರಿ ‌ಕಚೇರಿಗಳಿಗೆ ಅಲೆದಾಡಬೇಕಾಗುತ್ತಿತ್ತು. ಈಗ ಆಡಳಿತವೇ ಜನರ ಮನೆ ಬಾಗಿಲಿಗೆ ಬಂದಿದೆ. ಇದಕ್ಕೆ ಅಶೋಕ ಅವರ ಗ್ರಾಮ ವಾಸ್ತವ್ಯದ ಯೋಜನೆ ಕಾರಣ ಎಂದರು.

ಬಡವರಿಗೆ ಸರ್ಕಾರದ ಯೋಜನೆ ತಲುಪಬೇಕಿದ್ದರೆ ಬುದ್ದಿವಂತಿಕೆ‌ ಬೇಕಾಗಿಲ್ಲ, ಹೃದಯವಂತಿಕೆ ಬೇಕು. ಅಂತಹ ಹೃದಯವಂತಿಕೆ ಕೆಲಸವನ್ನು ಅಶೋಕ ‌ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ಬೊಮ್ಮಾಯಿ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.