ಬೆಂಗಳೂರು: ಆಗಸ್ಟ್ 14 ಅನ್ನು ‘ವಿಭಜನೆಯ ಭಯಾನಕ ನೆನಪಿನ ದಿನ’ವನ್ನಾಗಿ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ನಡೆಯನ್ನು ಸಚಿವ ಕೆ. ಸುಧಾಕರ್ ಸ್ವಾಗತಿಸಿದ್ದಾರೆ.
‘ವಿಭಜನೆಯಿಂದಾಗಿ ರಾಷ್ಟ್ರವು ಅನುಭವಿಸಿದ ನೋವು ಮತ್ತು ಸಂಕಟವನ್ನು ಸ್ಮರಿಸಲು ಆಗಸ್ಟ್ 14 ಅನ್ನು ವಿಭಜನೆಯ ಭಯಾನಕ ನೆನಪಿನ ದಿನವನ್ನಾಗಿ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿಯವರ ಕ್ರಮವನ್ನು ಸ್ವಾಗತಿಸುತ್ತೇನೆ. ವಿಭಜನೆಯು ದೇಶದ ಅತಿ ದೊಡ್ಡ ದುರಂತವಾಗಿದ್ದು, ಇದರಿಂದಾಗಿ ನಮ್ಮ ಅನೇಕ ಸಹೋದರ ಸಹೋದರಿಯರು ಸ್ಥಳಾಂತರಗೊಂಡು, ಅನೇಕರು ಮೃತಪಟ್ಟಿದ್ದರು’ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಓದಿ:ಆಗಸ್ಟ್ 14 ‘ವಿಭಜನೆಯ ಭಯಾನಕ ನೆನಪಿನ ದಿನ’: ಪ್ರಧಾನಿ ಮೋದಿ
ಪ್ರಧಾನಿಯವರು ಟ್ವೀಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಸುಧಾಕರ್ ಕೂಡ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.