ADVERTISEMENT

ಕಂದಾಯ ಸಚಿವ ಆರ್‌. ಅಶೋಕಗೆ ಕೋವಿಡ್-19 ದೃಢ

​ಪ್ರಜಾವಾಣಿ ವಾರ್ತೆ
Published 7 ಜನವರಿ 2022, 9:49 IST
Last Updated 7 ಜನವರಿ 2022, 9:49 IST
ಸಚಿವ ಆರ್‌. ಅಶೋಕ್‌
ಸಚಿವ ಆರ್‌. ಅಶೋಕ್‌   

ಬೆಂಗಳೂರು: ಕಂದಾಯ ಸಚಿವ ಆರ್‌. ಅಶೋಕಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರಿಗೆ ಸೋಂಕಿನಸೌಮ್ಯ ಲಕ್ಷಣಗಳು ಇರುವುದಾಗಿ ವರದಿಯಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ನನಗೆ ಕೋವಿಡ್ ದೃಢವಾಗಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ' ಎಂದಿದ್ದಾರೆ.

ADVERTISEMENT

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ ಕೋವಿಡ್‌ ನಿಯಂತ್ರಣ ಮತ್ತು ಚಿಕಿತ್ಸಾ ವ್ಯವಸ್ಥೆ ಕುರಿತು ಚರ್ಚಿಸಲು ಅವರು ಸಿಎಂ ಜೊತೆ ಎಲ್ಲ ಸಭೆಗಳಲ್ಲಿ ಇದ್ದರು. ಸಚಿವ ಸುಧಾಕರ್‌ ಕೂಡ ಜೊತೆಯಲ್ಲಿದ್ದರು. ಅಲ್ಲದೆ, ಕೋವಿಡ್‌ ತಜ್ಞರ ಸಭೆಯಲ್ಲೂ ಭಾಗಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.