ADVERTISEMENT

ವಿಧಾನಸೌಧದತ್ತ ಸುಳಿಯದ ಸಚಿವರು

​ಪ್ರಜಾವಾಣಿ ವಾರ್ತೆ
Published 24 ಜೂನ್ 2021, 21:08 IST
Last Updated 24 ಜೂನ್ 2021, 21:08 IST
ವಿಧಾನಸೌಧ
ವಿಧಾನಸೌಧ   

ಬೆಂಗಳೂರು: ಎಲ್ಲ ಸಚಿವರು ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಪ್ರತಿ ಗುರುವಾರ ಇರಬೇಕು ಎಂದುಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೂಚನೆ ನೀಡಿದ್ದರೂ, ಮೊದಲ ಗುರುವಾರ (ಜೂನ್‌ 24) ಬಹುತೇಕ ಸಚಿವರು ವಿಧಾನಸೌಧದ ಕಡೆ ಸುಳಿಯಲೇ ಇಲ್ಲ.

ಇದೇ 16ರಂದು ರಾಜ್ಯಕ್ಕೆ ಬಂದಿದ್ದ ಅರುಣ್ ಸಿಂಗ್, ಆಡಳಿತಕ್ಕೆ ಚುರುಕು ಮುಟ್ಟಿಸಲು ಮತ್ತು ಸರ್ಕಾರದ ವರ್ಚಸ್ಸು ಹೆಚ್ಚಿಸಲು ಎಲ್ಲ ಸಚಿವರು ವಿಧಾನಸೌಧದ ತಮ್ಮ ಕಚೇರಿಗೆ ಬಂದು ಶಾಸಕರಿಗೆ ಹಾಗೂ ಸಾರ್ವಜನಿಕರಿಗೆ ಲಭ್ಯವಾಗಬೇಕೆಂದು ಸೂಚಿಸಿದ್ದರು. ಆದರೆ, ಮೊದಲ ಗುರುವಾರ ಕೇವಲ ಐವರು ಸಚಿವರು ವಿಧಾನಸೌಧದಲ್ಲಿರುವ ತಮ್ಮ ಕಚೇರಿಗೆ ಬಂದಿದ್ದರು.

ಸಚಿವರಾದ ಜಗದೀಶ ಶೆಟ್ಟರ್, ಆರ್. ಅಶೋಕ, ಅರವಿಂದ ಲಿಂಬಾವಳಿ, ಆರ್. ಶಂಕರ್ ಮತ್ತು ಕೆ. ಗೋಪಾಲಯ್ಯ ಮಾತ್ರ ಬಂದಿದ್ದರು, ಅವರೂ ಕೆಲವು ತಾಸು ಮಾತ್ರ ಕಚೇರಿಯಲ್ಲಿದ್ದು ಕಾರ್ಯನಿರ್ವಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.