ADVERTISEMENT

ಬಿಜೆಪಿ ಸೋಲಿಗೆ ಸಹೋದರರು ಹೊಣೆಯಲ್ಲ: ಲಖನ್ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2021, 15:18 IST
Last Updated 15 ಡಿಸೆಂಬರ್ 2021, 15:18 IST
ಲಖನ್ ಜಾರಕಿಹೊಳಿ
ಲಖನ್ ಜಾರಕಿಹೊಳಿ   

ಗೋಕಾಕ: ‘ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರ ಸೋಲಿಗೆ ನನ್ನ ಸಹೋದರರೂ ಶಾಸಕರಾದ ರಮೇಶ ಮತ್ತು ಬಾಲಚಂದ್ರ ಜಾರಕಿಹೊಳಿ ಹೊಣೆಯಲ್ಲ ಅಥವಾ ಕಾರಣರಲ್ಲ’ ಎಂದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಜೇತರಾದ ಲಖನ್ ಜಾರಕಿಹೊಳಿ ಪ್ರತಿಕ್ರಿಯಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನನ್ನ ಸಹೋದರರು ಅವರ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದಾರೆ. ಅವರೇನಾದರೂ ನನ್ನ ಪರವಾಗಿ ಕೆಲಸ ಮಾಡಿದ್ದರೆ, ಇನ್ನೂ ಹೆಚ್ಚಿನ ಅಂತರದಿಂದ ಗೆಲ್ಲುತ್ತಿದೆ’ ಎಂದರು.

‘ಬಿಜೆಪಿ ಸೇರುವಿರಾ’ ಎಂಬ ಪ್ರಶ್ನೆಗೆ, ‘ಮುಂದೆ ನೋಡೋಣ’ ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.