ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಎಲ್ಲ ಏಳೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿರುವುದಾಗಿ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಿಸಿದ್ದಾರೆ.
ಬಿಜೆಪಿಯ ಎಂ.ಟಿ.ಬಿ.ನಾಗರಾಜ್, ಪ್ರತಾಪ ಸಿಂಹ ನಾಯಕ್, ಆರ್.ಶಂಕರ್, ಸುನೀಲ್ ವಲ್ಯಾಪುರೆ, ಕಾಂಗ್ರೆಸ್ನ ನಸೀರ್ ಅಹ್ಮದ್, ಬಿ.ಕೆ.ಹರಿಪ್ರಸಾದ್, ಜೆಡಿಎಸ್ನ ಗೋವಿಂದರಾಜ್ ಅವಿರೋಧ ಆಯ್ಕೆಯಾಗಿದ್ದಾರೆ.
ಸೋಮವಾರ ಸಂಜೆ ನಾಲ್ಕು ಗಂಟೆಯೊಳಗೆ ನಾಮಪತ್ರ ಹಿಂದಕ್ಕೆ ಪಡೆಯಲು ಕಡೆಯ ದಿನವಾಗಿತ್ತು. ಬೇರೆ ಯಾರೂ ಚುನಾವಣಾ ಕಣದಲ್ಲಿ ಉಳಿದಿರಲಿಲ್ಲ. ಹೀಗಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ವಿಶಾಲಾಕ್ಷಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.