ADVERTISEMENT

ಮಹಮ್ಮದ್ ಫಾಝಿಲ್​ ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸುತ್ತೇವೆ: ಎಡಿಜಿಪಿ

​ಪ್ರಜಾವಾಣಿ ವಾರ್ತೆ
Published 29 ಜುಲೈ 2022, 9:20 IST
Last Updated 29 ಜುಲೈ 2022, 9:20 IST
ಎಡಿಜಿಪಿ ಅಲೋಕ್​ ಕುಮಾರ್
ಎಡಿಜಿಪಿ ಅಲೋಕ್​ ಕುಮಾರ್   

ಸುರತ್ಕಲ್: ಯುವಕ ಮಹಮ್ಮದ್ ಫಾಝಿಲ್​ ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್​ ಕುಮಾರ್​ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳ ಸುಳಿವು ಸಿಕ್ಕಿದೆ. ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗುವುದು. ಯಾರು ಕೂಡ ವದಂತಿಗಳಿಗೆ ಕಿವಿಗೊಡಬಾರದು. ಫಾಝಿಲ್​ ಮನೆಯವರಿಂದಲೂ ಮಾಹಿತಿ ಪಡೆಯಲಾಗಿದೆ. ವಿವಿಧ ಆಯಾಮಗಳಿಂದ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದರು.

ಸಿಸಿಟಿವಿ ಕ್ಯಾಮೆರಾ ದೃಶ್ಯ ಆಧರಿಸಿ ಕಾರು ಪತ್ತೆ ಹಚ್ಚಿ ತನಿಖೆ ನಡೆಸುತ್ತಿದ್ದೇವೆ. ಯಾವುದೇ ಕಾರಣಕ್ಕೂ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಗಡಿಭಾಗದಲ್ಲಿ ವಾಹನಗಳನ್ನ ಚೆಕ್​ ಮಾಡಲಾಗುತ್ತಿದ್ದು, ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡಬೇಕು ಎಂದು ಅಲೋಕ್​ ಕುಮಾರ್​ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.