ADVERTISEMENT

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಜುಲೈ 2021, 6:38 IST
Last Updated 30 ಜುಲೈ 2021, 6:38 IST
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು  ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಚಿತ್ರ ಕೃಪೆ: ರಾಜನಾಥ್ ಸಿಂಗ್ ಅವರ ಟ್ವಿಟರ್ ಖಾತೆ)
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಚಿತ್ರ ಕೃಪೆ: ರಾಜನಾಥ್ ಸಿಂಗ್ ಅವರ ಟ್ವಿಟರ್ ಖಾತೆ)   

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಶುಕ್ರವಾರ ನವದೆಹಲಿಯಲ್ಲಿ ಭೇಟಿಯಾದರು.

ಈ ಕುರಿತು ರಾಜನಾಥ್ ಸಿಂಗ್ ಅವರು ಟ್ವೀಟ್ ಮಾಡಿದ್ದು, ಕರ್ನಾಟಕದ ನೂತನ ಮುಖ್ಯಮಂತ್ರಿಗಳಿಗೆ ಶುಭ ಹಾರೈಸಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಭೇಟಿಯಾದೆ. ಅವರ ಅಧಿಕಾರ ಅವಧಿ ಯಶಸ್ವಿಯಾಗಲೆಂದು ಹಾರೈಸಿದೆ ಎಂದು ಟ್ವೀಟ್ ನಲ್ಲಿ ರಕ್ಷಣಾ ಸಚಿವರು ಉಲ್ಲೇಖಿಸಿದ್ದಾರೆ.

ADVERTISEMENT

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೊಮ್ಮಾಯಿ ಅವರು ಮೊದಲ ಬಾರಿಗೆ ದೆಹಲಿಗೆ ತೆರಳಿದ್ದು ಪಕ್ಷದ ವರಿಷ್ಠರನ್ನು ಭೇಟಿಯಾಗಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರನ್ನೂ ಅವರು ಭೇಟಿಯಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.