ADVERTISEMENT

ಬಸವರಾಜ ಬೊಮ್ಮಾಯಿ ಪ್ರಮಾಣವಚನ LIVE | ವಾರದಲ್ಲೇ ಸಂಪುಟ ವಿಸ್ತರಣೆ: ಕಟೀಲ್

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭ ಹಾಗೂ ಸಂಬಂಧಿತ ರಾಜಕೀಯ ಚಟುವಟಿಕೆಗಳ ಲೈವ್ ಅಪ್‌ಡೇಟ್ಸ್ ಇಲ್ಲಿ ಲಭ್ಯ.

​ಪ್ರಜಾವಾಣಿ ವಾರ್ತೆ
Published 28 ಜುಲೈ 2021, 5:58 IST
Last Updated 28 ಜುಲೈ 2021, 5:58 IST

ಸಂಪುಟ ರಚನೆ ಸಿಎಂ ವಿವೇಚನಾ ಅಧಿಕಾರವಾಗಿದೆ. ಪಕ್ಷದ ವರಿಷ್ಠರ ಜತೆ ಚರ್ಚಿಸಿ ವಾರದಲ್ಲೇ ಸಂಪುಟ ವಿಸ್ತರಣೆ ನಡೆಸಲಾಗುವುದು. ವಲಸಿಗರು, ಮೂಲ ಎಂಬ ಪ್ರಶ್ನೆಯೇ ಇಲ್ಲ. ಪ್ರಾದೇಶಿಕತೆ, ಸಾಮಾಜಿಕ ನ್ಯಾಯ ಎಲ್ಲವನ್ನೂ ಪರಿಶೀಲಿಸಿ ಸಂಪುಟದಲ್ಲಿ ಸ್ಥಾನ ನೀಡಲಾಗುವುದು: ನಳಿನ್ ಕುಮಾರ್ ಕಟೀಲ್

ಮಾಜಿ ಸಚಿವರು, ಶಾಸಕರು, ಬಿಜೆಪಿ ಮುಖಂಡರು ತಂಡೋಪತಂಡವಾಗಿ ಬಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತಿದ್ದಾರೆ.

ವೇದಿಕೆಗೆ ಬಂದು ಹೂಗುಚ್ಛ ನೀಡಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿದ  ಬಿ.ಎಸ್. ಯಡಿಯೂರಪ್ಪ

ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಹೂಗುಚ್ಛ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿದರು

ಪ್ರಮಾಣವಚನ ಸ್ವೀಕರಿಸಿದ ಬಳಿಕ ಕಡತಕ್ಕೆ ಸಹಿ ಮಾಡುತ್ತಿರುವ ನೂತನ ಮುಖ್ಯಮಂತ್ರಿ

ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ

‘ಬಸವರಾಜ ಬೊಮ್ಮಾಯಿ ಎಂಬ ಹೆಸರಿನ ನಾನು ಕಾನೂನಿನ ಮೂಲಕ ಸ್ಥಾಪಿತ ಭಾರತ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆ ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತ್ವ ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣಪೂರ್ವಕವಾಗಿ ನೆರವೇರಿಸುತ್ತೇನೆಂದು, ಭಯ ಅಥವಾ ಪಕ್ಷಪಾತವಿಲ್ಲದೆ, ರಾಗ–ದ್ವೇಷವಿಲ್ಲದೆ ಎಲ್ಲರಿಗೂ ನ್ಯಾಯ ಒದಗಿಸಿಕೊಡುತ್ತೇನೆಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ’ ಎಂದು ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ

ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮಾರಂಭದ ಸ್ಥಳಕ್ಕೆ ತಲುಪಿದ್ದಾರೆ. ಗೋವಿಂದ ಕಾರಜೋಳ ಅವರೂ ಜತೆಗಿದ್ದಾರೆ

ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಮುರುಗೇಶ ನಿರಾಣಿ, ಡಾ.ಸಿ.ಎನ್. ಅಶ್ವತ್ಥನಾರಾಯಣ ಕೂಡ ಸಮಾರಂಭದಲ್ಲಿ ಭಾಗಿ

ರಾಜಭವನದ ಗಾಜಿನ ಮನೆ ತಲುಪಿದ ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

‘ಕಳೆದ ಎರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಿಪಡಿಸಲಿ' –  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ

ಕೋಟ‌ ಶ್ರೀನಿವಾಸ ಪೂಜಾರಿ, ಎಸ್.ಟಿ. ಸೋಮಶೇಖರ್, ಶಿವರಾಂ ಹೆಬ್ಬಾರ್, ಡಾ.ಕೆ. ಸುಧಾಕರ್, ಬೈರತಿ ಬಸವರಾಜ,‌ ಎಸ್. ಸುರೇಶ್ ಕುಮಾರ್, ವಿ. ಸೋಮಣ್ಣ, ಕೆ.ಸಿ. ನಾರಾಯಣ ಗೌಡ, ಎಂ.ಟಿ.ಬಿ. ನಾಗರಾಜ್ ಸೇರಿದಂತೆ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಹಲವರು ಸಮಾರಂಭದಲ್ಲಿ ಭಾಗಿ

ರಾಜಭವನದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ. ರಾಜಭವನದ ಮುಂಭಾಗದಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ರಾಜಭವನದ ಗಾಜಿನಮನೆಗೆ ಬಂದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

ಕುಮಾರಕೃಪಾ ಅತಿಥಿ ಗೃಹಕ್ಕೆ ಸಚಿವ ಸ್ಥಾನದ ಆಕಾಂಕ್ಷಿಗಳ ದಂಡು

ಕೇಂದ್ರ ಸಚಿವ ಹಾಗೂ ರಾಜ್ಯ ಬಿಜೆಪಿ ವೀಕ್ಷಕರಾಗಿ  ಬಂದಿದ್ದ ಧರ್ಮೇಂದ್ರ ಪ್ರಧಾನ್ ಅವರಿಗೆ ಮುರುಗೇಶ್ ನಿರಾಣಿ ಅವರು ಹೂಗುಚ್ಛ ನೀಡಿ ಅಭಿನಂದಿಸಿದರು. ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದರಾದ ಜಿ.ಎಂ. ಸಿದ್ಧೇಶ್ವರ್ ಇದ್ದರು.

ಬಸವರಾಜ ಬೊಮ್ಮಾಯಿ ಅವರ ಬೆನ್ನು ತಟ್ಟಿ ಶುಭ ಹಾರೈಸಿದ ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬುಧವಾರ ಬೆಳಿಗ್ಗೆ ಭೇಟಿಮಾಡಿ ಆಶೀರ್ವಾದ ಪಡೆದರು.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಬೆಳಗ್ಗೆ 11 ಗಂಟೆಗೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ತಂದೆ–ಮಗ ಇಬ್ಬರೂ ಮುಖ್ಯಮಂತ್ರಿಗಾದಿ ಅಲಂಕರಿಸಿದವರ ಸಾಲಿಗೆ ಬೊಮ್ಮಾಯಿ ಸಹ ಸೇರ್ಪಡೆಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.