ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಪುತ್ರ, ಯುವ ಜನತಾ ದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪಕ್ಷ ಸಂಘಟನೆ ಕಡೆ ಮುಖಮಾಡಿದ್ದಾರೆ.
ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಯುವ ಜನತಾ ದಳ (ಜಾ) ಮತ್ತು ವಿದ್ಯಾರ್ಥಿ ಜನತಾ ದಳ (ಜಾ) ಸಭೆಯನ್ನು ಸೋಮವಾರ ನಿಗದಿಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ರಾಜ್ಯದಲ್ಲಿ ಜನತಾದ ದಳ (ಜಾತ್ಯತೀತ) ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಯುವ ಜನತಾ ದಳ (ಜಾತ್ಯತೀತ) ಮತ್ತು ವಿದ್ಯಾರ್ಥಿ ಜನತಾ ದಳ (ಜಾತ್ಯತೀತ) ವಿಭಾಗದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಕಾರ್ಯಕಾರಿ ಸಮಿತಿಗಳ ಸದಸ್ಯರ ಸಭೆಯನ್ನು ದಿನಾಂಕ 04-01-2021 ರ ಸೋಮವಾರ ಪಕ್ಷದ ಕೇಂದ್ರಕಚೇರಿ ಜೆಪಿ ಭವನದಲ್ಲಿ ಆಯೋಜಿಸಲಾಗಿದೆ’ ಎಂದು ಉಲ್ಲೇಖಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.