ADVERTISEMENT

ರಾಜಕೀಯ ಪಕ್ಷಗಳ ಇಬ್ಭಾಗ, ಧಾರ್ಮಿಕ ಸಂಘರ್ಷ ಮತ್ತಷ್ಟು ಉಲ್ಬಣ: ಕೋಡಿಮಠ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2022, 7:46 IST
Last Updated 19 ಆಗಸ್ಟ್ 2022, 7:46 IST
ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ
ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ   

ಆನವಟ್ಟಿ: ‘ಮುಂಬರುವ ದಿನಗಳಲ್ಲಿ ರಾಜಕೀಯ ಪಕ್ಷಗಳು ಇಬ್ಭಾಗವಾಗುವ ಸಂಭವವಿದೆ’ ಎಂದು ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.

ಜಡೆ ಸಂಸ್ಥಾನ ಮಠದ ಕುಮಾರ ಕಂಪಿನ ಸಿದ್ಧವೃಷಭೇಂದ್ರ ಕರ್ತೃ ಗದ್ದುಗೆಯ ಶಿಲಾಮಯ ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿ, ಗದ್ಗುಗೆಯ ದರ್ಶನ ಪಡೆದು ಮಾತನಾಡಿದರು.

‘ನಾಡಿನಲ್ಲಿ ಬೆಂಕಿ ಅನಾಹುತ, ಅಕಾಲಿಕ ಮಳೆಯಂತಹ ಪ್ರಾಕೃತಿಕ ವಿಕೋಪಗಳು ಹೆಚ್ಚಾಗಲಿವೆ. ಶುಭ ನಾಮ ಸಂವತ್ಸರವು ದೇಶದಲ್ಲಿ ಅಶುಭವನ್ನು ಉಂಟು ಮಾಡಲಿದೆ. ನೈಜ ಜ್ಞಾನದ ಕೊರತೆಯಿಂದ ಮತಾಂಧತೆಯ ಧಾರ್ಮಿಕ ಸಂಘರ್ಷಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ಉಲ್ಬಣ ಗೊಳ್ಳಲಿವೆ’ ಎಂದು ತಿಳಿಸಿದರು.

ADVERTISEMENT

ಜಡೆ ಮಠದ ಡಾ.ಮಹಾಂತ ಸ್ವಾಮೀಜಿ, ಶಂತಪುರ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.