ಬೆಂಗಳೂರು: ‘ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ₹160 ಕೋಟಿ ಖರ್ಚು ಮಾಡಿ ನಡೆಸಿದ ಸಾಮಾಜಿಕ, ಶೈಕ್ಷಣಿಕ, ಅರ್ಥಿಕ ಸಮೀಕ್ಷೆ ಬಹಿರಂಗ ಮಾಡದೇ ಕಸದ ಬುಟ್ಟಿಗೆ ಹಾಕಿದ್ದು ವಚನ ಭ್ರಷ್ಟತೆ ಅಲ್ಲವೇ’ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿ ರುವ ರಾಮುಲು ಅವರು, ‘ವರದಿ ಬಿಡುಗಡೆ ಮಾಡದಂತೆ ನಿಮ್ಮ ಸಂಪುಟದ ಸಹೋದ್ಯೋಗಿಗಳೇ ಒತ್ತಡ ಹಾಕಿ, ಕಾಂತರಾಜು ಅವರ ವರದಿಯನ್ನು ಶೈತ್ಯಾಗಾರಕ್ಕೆ ಹಾಕಿದ್ದು ವಚನ ಭ್ರಷ್ಟತೆ ಅಲ್ಲದೆ ಮತ್ತೇನು? ಇದನ್ನು ಮಾಧ್ಯಮಗಳಲ್ಲಿ ವ್ಯವಸ್ಥಿತವಾಗಿ ಸೋರಿಕೆ ಮಾಡಿ, ಕೊನೆಗೆ ತಮಗೇ ತಿರುಗುಬಾಣವಾದೀತು ಎಂದು ಮುಚ್ಚಿ ಹಾಕಿದ ಪ್ರಖರ ಪಂಡಿತರು ನೀವಲ್ಲವೇ’ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.