ಬೆಂಗಳೂರು: ಬಸವ ಕಲ್ಯಾಣ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖೂಬಾ ಅವರನ್ನುಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
‘ಕೊನೆಗಳಿಗೆಯವರೆಗೂ ಪ್ರಯತ್ನ ನಡೆಸಿದರೂ ಕಣದಿಂದ ಹಿಂದೆ ಸರಿಯದೆ ಬಂಡುಕೋರರಾಗಿ ಉಳಿದಿದ್ದೀರಿ. ಇದು ಪಕ್ಷದ ಶಿಸ್ತಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಕಾರಣಕ್ಕೆ ಉಚ್ಚಾಟನೆ ಮಾಡಲಾಗಿದೆ’ ಎಂದು ಖೂಬಾ ಅವರಿಗೆ ಕಳಿಸಿರುವ ಪತ್ರದಲ್ಲಿ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.