ADVERTISEMENT

ಬಿಜೆಪಿಯವರು ರಾಜ್ಯದಲ್ಲಿ ತಾಲಿಬಾನ್ ಸಂಸ್ಕೃತಿ ಸ್ಥಾಪಿಸುತ್ತಿದ್ದಾರೆ: ಕಾಂಗ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಸೆಪ್ಟೆಂಬರ್ 2021, 9:15 IST
Last Updated 19 ಸೆಪ್ಟೆಂಬರ್ 2021, 9:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಅಧೋಗತಿಗೆ ಇಳಿದಿದ್ದು, ಬಿಜೆಪಿಯವರು ರಾಜ್ಯದಲ್ಲಿ ತಾಲಿಬಾನ್ ಸಂಸ್ಕೃತಿಯನ್ನು ಸ್ಥಾಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಗೃಹ ಮಂತ್ರಿಯೇ ನನ್ನ ಅತ್ಯಾಚಾರವಾಗುತ್ತಿದೆ ಎನ್ನುವಷ್ಟರ ಮಟ್ಟಿಗೆ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿಗಳಿಗೇ ಕೊಲೆ ಬೆದರಿಕೆ ಹಾಕಿಯೂ ಆರೋಪಿಗಳು ರಾಜಾರೋಷವಾಗಿ ತಿರುಗುತ್ತಿದ್ದಾರೆ. ಇನ್ನು ಸಾಮಾನ್ಯ ಜನರಿಗೆ ರಕ್ಷಣೆ ಸಿಗುತ್ತದೆಯೇ? ಬಿಜೆಪಿಯವರು ರಾಜ್ಯದಲ್ಲಿ ತಾಲಿಬಾನ್ ಸಂಸ್ಕೃತಿ ಸ್ಥಾಪಿಸುತ್ತಿದ್ದಾರೆ’ ಎಂದು ಟೀಕಿಸಿದೆ.

‘ಮೊನ್ನೆ ಒಬ್ಬ ಭಯೋತ್ಪಾದಕ ಕತ್ತಿ, ತಲ್ವಾರ್ ಮನೆಯಲಿಟ್ಟುಕೊಳ್ಳಿ ಎಂದು ಕಾನೂನು ಬಾಹಿರವಾಗಿ ಮಾತಾಡುತ್ತಾನೆ. ಮತ್ತೊಬ್ಬ ಮೈಸೂರಿನ ಅಧಿಕಾರಿಗಳಿಗೆ ಕೊಲೆ ಬೆದರಿಕೆಯೊಡ್ಡುತ್ತಾನೆ. ಇನ್ನೊಬ್ಬ ಮುಖ್ಯಮಂತ್ರಿಗೇ ಜೀವ ಬೆದರಿಕೆ ಹಾಕುತ್ತಾನೆ. ಈ ಕ್ರಿಮಿಗಳನ್ನು ಬಂಧಿಸದಿರುವುದೇಕೆ ಸಿ.ಎಂ. ಬೊಮ್ಮಾಯಿ ಅವರೇ, ನಿಮ್ಮ ಸರ್ಕಾರವೇ ಇವರನ್ನು ಸಾಕುತ್ತಿದೆ’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.