ADVERTISEMENT

ಬಿಜೆಪಿಯ ಜನಜಾಗೃತಿ ಸಮಾವೇಶ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2022, 9:20 IST
Last Updated 24 ಆಗಸ್ಟ್ 2022, 9:20 IST
   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವುದರಿಂದ ಆಗಸ್ಟ್ 26 ರಂದು ಏರ್ಪಡಿಸಿದ್ದ ಜನಜಾಗೃತಿ ಸಮಾವೇಶವನ್ನು ಬಿಜೆಪಿ ಮುಂದೂಡಿದೆ.

ನಿಷೇಧಾಜ್ಞೆ ತೆರವಾದ ಬಳಿಕ ಮುಂದಿನ ದಿನಾಂಕ ಪ್ರಕಟಿಸಲಾಗುವುದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಾಬಿನ್ ದೇವಯ್ಯ ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಮೊಟ್ಟೆ ತೂರಿದ ವ್ಯಕ್ತಿಯೆ ತಾನು‌ ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿರುವಾಗ ಆತ ಬಿಜೆಪಿ ಕಾರ್ಯಕರ್ತ ಎಂದು‌ ಕಾಂಗ್ರೆಸ್ ಆರೋಪಿಸುತ್ತಿರುವುದು ಸರಿಯಲ್ಲ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.